ಕರ್ನಾಟಕ

karnataka

ETV Bharat / bharat

ಕಾಶ್ಮೀರಕ್ಕೆ ಬಂದು, ವಾಸ್ತವತೆ ಅರಿತು ರಾಹುಲ್ ಮಾತನಾಡಲಿ.. ರಾಜ್ಯಪಾಲ ಸತ್ಯಪಾಲ್ ಮಲಿಕ್ ಟಾಂಗ್

"ರಾಹುಲ್ ಗಾಂಧಿ ಸ್ವತಃ ಈ ಸ್ಥಳಕ್ಕೆ ಒಮ್ಮೆ ಭೇಟಿ ನೀಡಲಿ. ನಾನು ಬೇಕಿದ್ದರೆ ವಿಮಾನದ ವ್ಯವಸ್ಥೆ ಮಾಡುತ್ತೇನೆ. ಕಾಶ್ಮೀರಕ್ಕೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿ ಆ ಬಳಿಕ ಮಾತನಾಡಲಿ" ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ರಾಗಾಗೆ ಟಾಂಗ್ ನೀಡಿದ್ದಾರೆ.

By

Published : Aug 13, 2019, 9:30 AM IST

ರಾಜ್ಯಪಾಲ ಸತ್ಯಪಾಲ್ ಮಲಿಕ್

ಶ್ರೀನಗರ:ಕಾಶ್ಮೀರಿಗರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದೆ ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ತಿರುಗೇಟು ನೀಡಿದ್ದಾರೆ.

"ರಾಹುಲ್ ಗಾಂಧಿ ಸ್ವತಃ ಈ ಸ್ಥಳಕ್ಕೆ ಒಮ್ಮೆ ಭೇಟಿ ನೀಡಲಿ. ನಾನು ಬೇಕಿದ್ದರೆ ವಿಮಾನದ ವ್ಯವಸ್ಥೆ ಮಾಡುತ್ತೇನೆ. ಕಾಶ್ಮೀರಕ್ಕೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿ ಆ ಬಳಿಕ ಮಾತನಾಡಲಿ" ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ರಾಗಾಗೆ ಟಾಂಗ್ ನೀಡಿದ್ದಾರೆ.ಶನಿವಾರದಂದು ಜಮ್ಮು ಕಾಶ್ಮೀರದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ ಎಂದು ರಾಹುಲ್ ಗಾಂಧಿ ಕೆಲ ದಿನಗಳ ಹಿಂದೆ ಹೇಳಿದ್ದರು.

ABOUT THE AUTHOR

...view details