ನವದೆಹಲಿ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಕೇಂದ್ರದ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಶೂನ್ಯ ಬಜೆಟ್ ಕೃಷಿ, ಹರ್ ಘರ್ ಜಲ್ ಯೋಜನೆ ಸೇರಿದಂತೆ ಕೆಲವು ಕೊಡುಗೆಗಳನ್ನು ದೇಶದ ಗ್ರಾಮೀಣ ಭಾಗಕ್ಕೆ ನೀಡಿದ್ದಾರೆ.
2024 ರ ವೇಳೆಗೆ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ 'ಹರ್ ಘರ್ ಜಲ್' (ಪ್ರತಿ ಮನೆಗೂ ಕೊಳವೆ ನೀರು ಸರಬರಾಜು) ನೀಡಲು ಜಲ ಜೀವನ್ ಮಿಷನ್ ಅನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ. ಅಲ್ಲದೇ ಜಲ ಸಂಪನ್ಮೂಲ ಮತ್ತು ನೀರು ಸರಬರಾಜಿನ ನಿರ್ವಹಣೆಯನ್ನು ಸಮಗ್ರ ರೀತಿಯಲ್ಲಿ ಮಾಡಲು 'ಹೊಸ ಜಲ ಶಕ್ತಿ ಮಂತ್ರಾಲಯ' ಯೋಜನೆಯನ್ನು ಜಾರಿಗೊಳಿಸಲಿದೆ. ಜಲ್ ಶಕ್ತಿ ಅಭಿಯಾನಕ್ಕಾಗಿ ದೇಶದ 256 ಜಿಲ್ಲೆಗಳಾದ್ಯಂತ 1592 ನಿರ್ಣಾಯಕ ಮತ್ತು ಹೆಚ್ಚು ಶೋಷಿತ ಬ್ಲಾಕ್ಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.