ಕರ್ನಾಟಕ

karnataka

By

Published : Jan 20, 2022, 4:04 AM IST

ETV Bharat / bharat

ಬಿಜೆಪಿಗೆ ಸೇರಿದ ಜನರಲ್ ಬಿಪಿನ್ ರಾವತ್ ಸಹೋದರ

ಭಾರತದ ದಿವಂಗತ ಮೊದಲ ರಕ್ಷಣಾ ಸಿಬ್ಬಂದಿಯ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸಹೋದರ ಕರ್ನಲ್ ವಿಜಯ್ ರಾವತ್ (ನಿವೃತ್ತ) ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ.

ಬಿಜೆಪಿಗೆ ಸೇರಿದ ಜನರಲ್ ಬಿಪಿನ್ ರಾವತ್ ಸಹೋದರ
ಬಿಜೆಪಿಗೆ ಸೇರಿದ ಜನರಲ್ ಬಿಪಿನ್ ರಾವತ್ ಸಹೋದರ

ನವದೆಹಲಿ: ಭಾರತದ ದಿವಂಗತ ರಕ್ಷಣಾ ಸಿಬ್ಬಂದಿಯ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸಹೋದರ ಕರ್ನಲ್ ವಿಜಯ್ ರಾವತ್ (ನಿವೃತ್ತ) ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್, ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ಅನಿಲ್ ಬಲುನಿ ಮತ್ತು ಉತ್ತರಾಖಂಡ ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ಅವರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷಕ್ಕೆ ಸೇರಿದ್ದಾರೆ.

ಮೂಲಗಳ ಪ್ರಕಾರ ಕರ್ನಲ್ ರಾವತ್ ಅವರು ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಲ್ ರಾವತ್, ಸೇನೆಯಿಂದ ನಿವೃತ್ತರಾದ ನಂತರ ತಮ್ಮ ತಂದೆ ಕೂಡ ಬಿಜೆಪಿಗೆ ಸೇರಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಮತ್ತು ನೀತಿಗಳಿಂದ ಪ್ರಭಾವಿತರಾಗಿ ಪಕ್ಷಕ್ಕೆ ಸೇರಲು ನಿರ್ಧರಿಸಲಾಯಿತು ಎಂದಿದ್ದಾರೆ.

ABOUT THE AUTHOR

...view details