ಕೋಲ್ಕತಾ (ಪಶ್ಚಿಮ ಬಂಗಾಳ): ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ, ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಬಿಜೆಪಿ ಯುವ ನಾಯಕಿ ಪಮೆಲಾ ಗೋಸ್ವಾಮಿ ಆಗ್ರಹಿಸಿದ್ದಾರೆ.
ಪಮೆಲಾ ಅವರನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಎನ್ಡಿಪಿಎಸ್ ಕೋರ್ಟ್ ಆದೇಶ ಹೊರಡಿಸಿತು. ಆ ಬಳಿಕ ಕೋರ್ಟ್ನಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಾಗ ಗೋಸ್ವಾಮಿ ಕೂಗಾಡುತ್ತಾ, ಈ ಸಂಬಂಧ ಸಿಐಡಿ ತನಿಖೆ ಆಗಬೇಕು. ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ್ವರ್ಗೀಯಾ ಅವರ ಆಪ್ತ ಬಿಜೆಪಿ ನಾಯಕ ರಾಕೇಶ್ ಸಿಂಗ್ ಅವರ ಕೈವಾಡ ಇದ್ದು, ಆತನನ್ನು ಬಂಧಿಸುವಂತೆ ಗೋಸ್ವಾಮಿ ಆಗ್ರಹಿಸಿದ್ದಾರೆ.