ಪಾಲಕ್ಕಾಡ್ (ಕೇರಳ): ಮೆಟ್ರೊ ರೈಲು ಸೇರಿದಂತೆ ಭಾರತದಾದ್ಯಂತ ಹಲವಾರು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದ ತಂತ್ರಜ್ಞ ಮೆಟ್ರೊಮ್ಯಾನ್ ಇ. ಶ್ರೀಧರನ್, ಕೇರಳದಲ್ಲಿ ಭಾರತೀಯ ಜನತಾ ಪಕ್ಷದ ಭವಿಷ್ಯ ತಿರುಗಿಸುವ ವಿಶ್ವಾಸ ಹೊಂದಿದ್ದಾರೆ. "ಒಂದೋ ಪಕ್ಷವು ರಾಜ್ಯದಲ್ಲಿ ಕಿಂಗ್ ಮೇಕರ್ ಆಗಿ ವಿಕಸನಗೊಳ್ಳಲು ಪೂರ್ಣ ಬಹುಮತ ಸಿಗಬಹುದು. ಇಲ್ಲವೇ ಸಾಕಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಜಯಗಳಿಸಬಹುದು " ಎಂದಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮದೊಂದಿದೆ ಮಾತನಾಡಿದ ಅವರು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. "ಬಿಜೆಪಿ ಕೇರಳದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಗಳಿವೆ ಎಂದು ನಾನು ಭಾವಿಸುತ್ತೇನೆ. ಇದು ಸಂಪೂರ್ಣ ಬಹುಮತವಾಗಿರಬಹುದು ಅಥವಾ ವಿಧಾನಸಭೆ ಪ್ರವೇಶಿಸಬಹುದಾದ ಸಂಖ್ಯೆಯನ್ನು ಹೊಂದಿರಬಹುದು. ಈ ಮೂಲಕ ಬಿಜೆಪಿ ಕಿಂಗ್ ಮೇಕರ್ ಆಗುತ್ತದೆ" ಎಂದು ಶ್ರೀಧರನ್ ಹೇಳಿದರು.