ಕರ್ನಾಟಕ

karnataka

ETV Bharat / bharat

ಕೊಲೆ ಯತ್ನ ಪ್ರಕರಣ; ಬಿಜೆಪಿ ಶಾಸಕನ ಪುತ್ರ ಅರೆಸ್ಟ್​ - ಬಿಜೆಪಿ ಶಾಸಕ ಪುತ್ರನ ಬಂಧನ

ಮಧ್ಯಪ್ರದೇಶದ ಪಿಚೋರ್‌ನ ಶಾಸಕ ಪ್ರೀತಮ್ ಲೋಧಿ ಅವರ ಪುತ್ರನನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಬಿಜೆಪಿ ಶಾಸಕ ಪುತ್ರನ ಬಂಧನ
ಬಿಜೆಪಿ ಶಾಸಕ ಪುತ್ರನ ಬಂಧನ

By PTI

Published : Jan 1, 2024, 10:56 PM IST

ಗ್ವಾಲಿಯರ್ (ಮಧ್ಯಪ್ರದೇಶ) : ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿರುವ ಆರೋಪದ ಮೇಲೆ ಬಿಜೆಪಿ ಶಾಸಕನ ಪುತ್ರನನ್ನು ಬಂಧಿಸಿರುವ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ. ಗ್ವಾಲಿಯರ್ ಜಿಲ್ಲೆಯ ಜಲಾಲ್‌ಪುರ ಗ್ರಾಮದ ನಿವಾಸಿಯಾದ ರವೀಂದ್ರ ಯಾದವ್ ಎಂಬುವರು ನೀಡಿರುವ ದೂರಿನ ಮೇರೆಗೆ ಪಿಚೋರ್‌ನ ಶಾಸಕ ಪ್ರೀತಮ್ ಲೋಧಿ ಅವರ ಪುತ್ರ ಆರೋಪಿ ದಿನೇಶ್ ಲೋಧಿಯನ್ನು ಬಂಧಿಸಿದ್ದಾರೆ.

ಡಿಸೆಂಬರ್ 31 ರ ರಾತ್ರಿ ಆರೋಪಿ ದಿನೇಶ್ ಲೋಧಿ ತನ್ನ ಕಾರನ್ನು ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ರವೀಂದ್ರ ಯಾದವ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲೇ ಅಲ್ಲೇ ನಿಂತಿದ್ದ ರವೀಂದ್ರ ಮತ್ತು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿರಂಜನ್ ಶರ್ಮಾ ಮಾಧ್ಯಮಗಳೊಂದಿಗೆ ಮಾಹಿತಿ ನೀಡಿದ್ದಾರೆ.

ಕೇಕ್ ತರಲು ಹೋಗಿದ್ದ ಯುವಕನ ಭೀಕರ ಹತ್ಯೆ :ಇನ್ನೊಂದೆಡೆ ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ವಡ್ಡರಬಂಡೆಯಲ್ಲಿರುವ ಬೇಕರಿವೊಂದರ ಬಳಿ ಭಾನುವಾರ ರಾತ್ರಿ ನಡೆದಿತ್ತು. ಮೃತ ವ್ಯಕ್ತಿಯನ್ನು ಆರ್.ಕೆ ಕಾಲೊನಿಯ ನಿವಾಸಿ ಸೈಯದುಲ್ಲಾ (24) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಬಾಪೂಜಿ ನಗರದ ನಿವಾಸಿ ರಜಾಕ್ ಅಲಿ (26) ಗಾಯಗೊಂಡಿದ್ದು, ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಕು ಇರಿದ ಬಳಿಕ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಸಂಬಂಧ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಬಳ್ಳಾರಿ : ಹೊಸ ವರ್ಷಾಚರಣೆಗೆ ಕೇಕ್​ ತರಲು ಬಂದಿದ್ದ ಯುವಕನ ಹತ್ಯೆ

ABOUT THE AUTHOR

...view details