ಕರ್ನಾಟಕ

karnataka

By

Published : Mar 14, 2022, 8:06 PM IST

ETV Bharat / bharat

ಕೊಟ್ಟ ಮಾತು ಉಳಿಸಿಕೊಳ್ಳಲು ಮುಂದಾದ ಬಿಜೆಪಿ.. ಹೋಳಿ ನಂತರ ಉಚಿತ ಸಿಲಿಂಡರ್?​

ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಭರವಸೆ ಈಡೇರಿಸಲು ಉತ್ತರ ಪ್ರದೇಶ ಭಾರತೀಯ ಜನತಾ ಪಾರ್ಟಿ ನಿರ್ಧರಿಸಿದೆ. ಇದೀಗ ಉಜ್ವಲ ಯೋಜನೆ ಅಡಿ ಉಚಿತವಾಗಿ ಸಿಲಿಂಡರ್ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದೆ.

BJP to give free gas cylinder on Holi in UP
BJP to give free gas cylinder on Holi in UP

ಲಖನೌ(ಉತ್ತರ ಪ್ರದೇಶ): 255 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಸರ್ಕಾರ ರಚನೆ ಮಾಡುವ ಕಸರತ್ತು ನಡೆಸುತ್ತಿದೆ. ಇದರ ಜೊತೆಗೆ ಚುನಾವಣೆ ವೇಳೆ ಘೋಷಣೆ ಮಾಡಿದ್ದ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಲು ಮುಂದಾಗಿದೆ.

ಚುನಾವಣೆ ವೇಳೆ ಲೋಕ ಕಲ್ಯಾಣ ಸಂಕಲ್ಪ ಎಂಬ ಪ್ರಣಾಳಿಕೆ ರಿಲೀಸ್ ಮಾಡಿದ್ದ ಬಿಜೆಪಿ ಉಜ್ವಲ ಯೋಜನೆಯಡಿ ಪ್ರತಿ ವರ್ಷ ಕುಟುಂಬವೊಂದಕ್ಕೆ ಮೂರು ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿತ್ತು. ಅದರ ಪ್ರಕಾರ ಇದೀಗ ಹೋಳಿ ಹಬ್ಬದಿಂದ ಈ ಯೋಜನೆಯನ್ನು ಜನರಿಗೆ ತಲುಪಿಸುವ ನಿರ್ಧಾರ ಕೈಗೊಂಡಿದೆ ಎಂಬ ಮಾತು ಮೂಲಗಳಿಂದ ತಿಳಿದುಬಂದಿದೆ.

ಮಾರ್ಚ್​​​ 17-18ರಂದು ಸಭೆ ನಡೆಸಲು ಬಿಜೆಪಿ ಮುಂದಾಗಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ 1000 ಕೋಟಿ ರೂ. ಮೀಸಲಿಡಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಎಲ್ಲ ಭರವಸೆ ಈಡೇರಿಸಲು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ದುರ್ಗಾಶಂಕರ್​​ ಮಿಶ್ರಾ ಈಗಾಗಲೇ ಸಕ್ರಿಯರಾಗಿ ಕೆಲಸ ಮಾಡ್ತಿದ್ದಾರೆಂದು ಹೇಳಲಾಗ್ತಿದೆ.

ಇದನ್ನೂ ಓದಿರಿ:ಬಲೆಗೆ ಬಿತ್ತು 'ವ್ಯಕ್ತಿಯ ಮುಖ' ಹೋಲುವ ಮೀನು.. ಇದು ಮನುಷ್ಯನನ್ನೇ ಕೊಲ್ಲುವಷ್ಟು ವಿಷಕಾರಿ!

ಮುಂದಿನ ಕೆಲ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ನಿರ್ಧಾರ ಕೈಗೊಳ್ಳಲಿದ್ದು, ಅದಕ್ಕಾಗಿ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಕಾಲೇಜ್​ಗೆ ಹೋಗುವ ವಿದ್ಯಾರ್ಥಿನಿಯರಿಗೆ ಸ್ಕೂಟಿ, ಲ್ಯಾಪ್​ಟಾಪ್ ನೀಡುವುದಾಗಿ ಘೋಷಣೆ ಮಾಡಿದ್ದು, ರೈತರಿಗೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ತಿಳಿಸಿತ್ತು. ಜೊತೆಗೆ ವಿಧವೆಯರಿಗೆ ಮತ್ತು ನಿರ್ಗತಿಕ ಮಹಿಳೆಯರಿಗೆ ತಿಂಗಳಿಗೆ 1500 ರೂ. ಪಿಂಚಣಿ ನೀಡುವುದಾಗಿ ಹೇಳಿದೆ.

ABOUT THE AUTHOR

...view details