ಕೃಷ್ಣಾ (ಆಂಧ್ರಪ್ರದೇಶ):2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 10,000 ಕೋಟಿ ವೆಚ್ಚದಲ್ಲಿ ಅಮರಾವತಿಯನ್ನು ರಾಜಧಾನಿಯನ್ನು ಅಭಿವೃದ್ಧಿ ಪಡಿಸುವುದಾಗಿ ಭಾರತೀಯ ಜನತಾ ಪಕ್ಷದ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಸೋಮು ವೀರರಾಜು ಘೋಷಿಸಿದ್ದಾರೆ.
ಕೃಷ್ಣಾ ಜಿಲ್ಲೆಯ ಪೆನುಗಂಚಿಪ್ರೋಲು ಗ್ರಾಮ ದೇವತೆ ತಿರುಪತಮ್ಮ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, ತೆಲುಗು ದೇಶಂ ಪಕ್ಷ ಮತ್ತು ವೈಎಸ್ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.