ಕರ್ನಾಟಕ

karnataka

ETV Bharat / bharat

ಬಂಗಾಳದಲ್ಲಿ ನಿಲ್ಲದ ಹಿಂಸಾಚಾರ: ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ವಶಕ್ಕೆ ಪಡೆದ ಪೊಲೀಸರು - ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ಫೈಟ್​

ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವಿನ ಜಟಾಪಟಿ ಮುಂದುವರೆದಿದೆ. ಈ ಮತ್ತೆ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದ್ದು ಟಿಎಂಸಿಯಿಂದ ಈ ಕೊಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

BJP worker's body recovered in East Midnapore
ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ವಶ

By

Published : Apr 8, 2021, 5:26 PM IST

ಈಸ್ಟ್​​ ಮಿಡ್ನಾಪುರ( ಪ.ಬಂಗಾಳ)ಬಂಗಾಳದಲ್ಲಿ ಇನ್ನೂ ನಾಲ್ಕೈದು ಹಂತದ ಚುನಾವಣೆ ಬಾಕಿ ಇದೆ. ಈಗಾಗಲೇ ರಾಜ್ಯದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ.

ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ವಶ

ಮೂರನೇ ಹಂತದ ಮತದಾನದ ವೇಳೆ ಹಲವು ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಬಿಜೆಪಿ ಹಾಗೂ ಟಿಎಂಸಿ ನಡುವೆ ಮಾರಾಮಾರಿಗಳು ಮುಂದುವರೆದಿವೆ. ಈ ನಡುವೆ ಟಿಎಂಸಿ ಕಾರ್ಯಕರ್ತರು ಬಿಜೆಪಿ ಸದಸ್ಯರ ಮೇಲೆ, ಬಿಜೆಪಿ ಬೆಂಬಲಿಗರು ತೃಣಮೂಲ ಕಾಂಗ್ರೆಸ್​​ ಸಪೋರ್ಟ್ಸ್​​ಗಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ.

ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ವಶ

ಈ ಮಾತಿಗೆ ಇಂಬು ನೀಡುವಂತೆ ಈಸ್ಟ್​ ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಕಾರ್ಯಕರ್ತನನ್ನು ಶಂಭು ಬರೈ ಎಂದು ಗುರುತಿಸಲಾಗಿದೆ. ನಮ್ಮ ಕಾರ್ಯಕರ್ತನನ್ನು ಟಿಎಂಸಿ ಕಡೆ ಜನ ಕೊಂದು ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಆರೋಪವನ್ನು ಟಿಎಂಸಿ ಅಲ್ಲಗಳೆದಿದೆ.

For All Latest Updates

ABOUT THE AUTHOR

...view details