ಹೈದರಾಬಾದ್ :ಕೇಂದ್ರ ಸರ್ಕಾರದಿಂದ 2021-22ರ ಹಣಕಾಸು ಬಜೆಟ್ ಮಂಡಿಸಲು ಕೆಲವೇ ಕೆಲವು ತಿಂಗಳು ಬಾಕಿಯಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹೊಸ ಸವಾಲುಗಳು ಎದುರಾಗಲಿವೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಣಕಾಸು ಆಯೋಗದ ಶಿಫಾರಸುಗಳನ್ನು ಬಜೆಟ್ನಲ್ಲಿ ಅಳವಡಿಕೊಳ್ಳುವುದು ಕೇಂದ್ರ ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಲಿದೆ ಎಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ನ ವೈಸ್ ಚಾನ್ಸಲರ್ ಡಾ.ಎನ್.ಆರ್.ಭಾನುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಈ ತಿಂಗಳ ಆರಂಭದಲ್ಲಿ 15 ಹಣಕಾಸು ಆಯೋಗ 2021-22ರಿಂದ 2025-26ರ ಅವಧಿಯಲ್ಲಿ ರಾಜ್ಯಗಳಿಗೆ ತೆರಿಗೆ ಹಂಚಿಕೆ, ರಾಜ್ಯಗಳಿಗೆ ತೆರಿಗೆ ಹಂಚಿಕೆ, ಸ್ಥಳೀಯ ಸರ್ಕಾರಕ್ಕೆ ಅನುದಾನ, ವಿಪತ್ತು ನಿರ್ವಹಣಾ ಅನುದಾನ ಮುಂತಾದ ವಿಚಾರಗಳ ಬಗ್ಗೆ ಕೆಲವು ಶಿಫಾರಸುಗಳನ್ನು ರಾಷ್ಟ್ರಪತಿಗೆ ಸಲ್ಲಿಸಿತ್ತು. ಈ ವರದಿ ಇನ್ನೂ ಬಹಿರಂಗವಾಗಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಾ.ಎನ್.ಆರ್.ಭಾನುಮೂರ್ತಿ ಹಣಕಾಸು ಆಯೋಗದ ಶಿಫಾರಸುಗಳ ಬಗ್ಗೆ ಅಥವಾ ಆ ಶಿಫಾರಸುಗಳು ಕೇಂದ್ರ ಮತ್ತು ರಾಜ್ಯಗಳ ಹಣಕಾಸಿನ ಮೇಲೆ ಬೀರುವ ಪರಿಣಾಮಗಳ ಬಗ್ಗೆ ನಮಗಿನ್ನೂ ತಿಳಿದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ ಹೇಗಿರಬೇಕು, ನೀವು ಕೂಡ ಮೋದಿ ಸರ್ಕಾರಕ್ಕೆ ಸಲಹೆ ನೀಡಬಹುದು.. ಅದಕ್ಕೆ ಹೀಗೆ ಮಾಡಿ..
ಆದರೆ, ಹಣಕಾಸು ಆಯೋಗದ ಶಿಫಾರಸುಗಳು ಹಣಕಾಸಿನ ಗುರಿಗಳನ್ನು ಸಾಧಿಸಲು ವಿಭಿನ್ನ ಚೌಕಟ್ಟು ಅಥವಾ ಮಾರ್ಗಸೂಚಿಗಳ ಮೇಲೆ ಬೆಳಕು ಚೆಲ್ಲುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ಭಾನುಮೂರ್ತಿ ಹೇಳಿದ್ದಾರೆ.