ಕರ್ನಾಟಕ

karnataka

ETV Bharat / bharat

ಉದ್ಯಮಿ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು.. ಹೊತ್ತಿ ಉರಿದ ಕೂಚ್​ ಬೆಹಾರ್​! - ಉದ್ಯಮಿ ಗುಂಡಿಕ್ಕಿ ಕೊಲೆ

ದುಷ್ಕರ್ಮಿಗಳ ಗುಂಡೇಟಿಗೆ ಉದ್ಯಮಿಯೋರ್ವ ಬಲಿಯಾಗಿದ್ದು, ಇದೇ ಕಾರಣಕ್ಕಾಗಿ ಪಶ್ಚಿಮ ಬಂಗಾಳದ ಕೊಚ್​ ಬೆಹರ್​ ಹೊತ್ತಿ ಉರಿದಿದೆ.

Cooch Behar
Cooch Behar

By

Published : Apr 7, 2021, 4:03 PM IST

ಕೂಚ್​ ಬೆಹಾರ್​(ಪಶ್ಚಿಮ ಬಂಗಾಳ):ಉದ್ಯಮಿಯೊಬ್ಬನನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, ಹೀಗಾಗಿ ಪಶ್ಚಿಮ ಬಂಗಾಳದ ಕೂಚ್​ ಬೆಹಾರ್​​ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಹೊತ್ತಿ ಉರಿದ ಕೂಚ್​ ಬೆಹಾರ್

ಗುಂಡು ಹಾರಿಸಿ ಇಂದು ಬೆಳಗ್ಗೆ ಉದ್ಯಮಿ ಕೊಲೆ ಮಾಡಲಾಗಿದ್ದು, ಇದಾದ ಗಂಟೆ ಕಳೆದ್ರೂ ಸ್ಥಳಕ್ಕೆ ಪೊಲೀಸರು ಆಗಮಿಸಿದ ಕಾರಣ ಸ್ಥಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.

ರೋಡ್​ನಲ್ಲಿ ಟೈರ್​ ಸುಟ್ಟು ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದು, ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಖಾಕಿ ಪಡೆ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್​ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದರು.

ಇದನ್ನೂ ಓದಿ: ಈ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್​ಬಿಐ

ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ABOUT THE AUTHOR

...view details