ಕರ್ನಾಟಕ

karnataka

ETV Bharat / bharat

ಚುನಾವಣೆ ಹಿನ್ನೆಲೆಯಲ್ಲಿ ದಲಿತ, ಹಿಂದುಳಿದವರಿಗೆ ಸಚಿವ ಸ್ಥಾನ ನೀಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

43 ಸಂಸದರಿಗೆ ಮೋದಿ ಸಚಿವ ಸಂಪುಟದಲ್ಲಿ ಅವಕಾಶ ನೀಡಲಾಗಿದ್ದು, ಈ ವಿಚಾರವಾಗಿ ಮೊದಲ ಸಲ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

By

Published : Jul 7, 2021, 5:59 PM IST

Mallikarjun Kharge
Mallikarjun Kharge

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್​ ರಚನೆಯಾಗಿದ್ದು, ಅನೇಕ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರಮುಖವಾಗಿ ದಲಿತ ಹಾಗೂ ಹಿಂದುಳಿದ ವರ್ಗಗಳ ಸದಸ್ಯರನ್ನು ಕ್ಯಾಬಿನೆಟ್​​ನಲ್ಲಿ ಸೇರಿಸಿಕೊಳ್ಳಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಸಚಿವ ಸಂಪುಟದಲ್ಲಿ ಹಲವು ದಲಿತ ಹಾಗೂ ಹಿಂದುಳಿದ ವರ್ಗಗಳ ಸದಸ್ಯರಿಗೆ ಸಚಿವಗಿರಿ ನೀಡಲಾಗಿದೆ. ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಹೀಗೆ ಮಾಡಲಾಗಿದೆ ಎಂದು ಹೇಳಿರುವ ಖರ್ಗೆ, ಸಮುದಾಯಗಳ ಒಳಿತಿಗಾಗಿ ಅವರು ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಇದಾಗಿದೆ ಎಂದು ಆರೋಪ ಮಾಡಿದ್ದಾರೆ.

ಕಾಂಗ್ರೆಸ್​ ವಕ್ತಾರ ಜೈವೀರ್​ ಶೆರ್ಗಿಲ್​

ಇದೇ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್​​​ ವಕ್ತಾರ್​​ ಜೈವೀರ್​​ ಶೆರ್ಗಿಲ್​, ಕೇಂದ್ರ ಕ್ಯಾಬಿನೆಟ್​ ಪುನರ್​ ರಚನೆಯಾಗಿರುವುದರಲ್ಲಿ ಯಾವುದೇ ಅರ್ಥವಿಲ್ಲ. ದೇಶದ ಆರ್ಥಿಕತೆ, ನಿರುದ್ಯೋಗ, ಆರೋಗ್ಯ ಹಾಗೂ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.

ABOUT THE AUTHOR

...view details