ಕರ್ನಾಟಕ

karnataka

ETV Bharat / bharat

ಠಾಕ್ರೆ ಟೀಕಿಸಿದ ಕೇಂದ್ರ ಸಚಿವ ರಾಣೆ ಬಂಧನಕ್ಕೆ ಆದೇಶ; ಮುಂಬೈ ಮನೆಗೆ ಬಿಗಿ ಪೊಲೀಸ್ ಭದ್ರತೆ - ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಟೀಕಿಸಿದ್ದ ಕೇಂದ್ರ ಸಚಿವ ನಾರಾಯಣ್‌ ರಾಣೆ ವಿರುದ್ಧ ನಾಸಿಕ್‌ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಇದರ ಬೆನ್ನಲ್ಲೇ ರಾಣೆ ಅವರನ್ನು ಬಂಧಿಸುವಂತೆ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದು, ಇದಕ್ಕಾಗಿ ಡಿಸಿಪಿ ಸಂಜಯ್‌ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದಾರೆ. ಇನ್ನೊಂದೆಡೆ, ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿರುವ ಸಚಿವರ ಮನೆಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

case filed against central minister narayana rane for criticizing maha cm thakre
ಸಿಎಂ ಠಾಕ್ರೆ ಟೀಕಿಸಿದ ಆರೋಪ; ಕೇಂದ್ರ ಸಚಿವ ರಾಣೆ ವಿರುದ್ಧ ಪ್ರಕರಣ ದಾಖಲು

By

Published : Aug 24, 2021, 9:50 AM IST

Updated : Aug 24, 2021, 10:17 AM IST

ಮುಂಬೈ:ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಲ್ಲಿ ಕೇಂದ್ರ ಸಚಿವ ನಾರಾಯಣ್‌ ರಾಣೆ ವಿರುದ್ಧ ವಿವಿಧ ಠಾಣೆಗಳಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದರಲ್ಲಿ ಬೆನ್ನಲ್ಲೇ ಅಲ್ಲಿನ ಪೊಲೀಸ್‌ ಕಮಿಷನರ್‌ ರಾಣೆ ಅವರನ್ನು ಬಂಧಿಸುವಂತೆ ಆದೇಶಿಸಿದ್ದು, ಡಿಸಿಪಿ ಸಂಜಯ್‌ ಬರ್ಕುಂದ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದಾರೆ.

ಕೇಂದ್ರ ಸಚಿವ ನಾರಾಯಣ್‌ ರಾಣೆ ವಿರುದ್ಧ ನಾಸಿಕ್‌ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಶಿವಸೇನಾ ಮುಖಂಡ ಸುಧಾಕರ್‌ ಬಡ್ಗುಜರ್‌ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಸಿಕ್‌ ಮಾತ್ರವಲ್ಲದೆ ರಾಯ್‌ಗಢ್‌, ಔರಂಗಾಬಾದ್‌, ಪುಣೆ ಸೇರಿದಂತೆ ಇತರೆ ಹಲವು ನಗರಗಳಲ್ಲಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್‌ 500, 502, 505, 153ರ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಮುಂಜಾಗ್ರತಾ ಕ್ರಮವಾಗಿ ಮುಂಬೈನ ಜುಹುವಿನಲ್ಲಿರುವ ಸಚಿವರ ಮನೆಗೆ ಭದ್ರತೆ ಒದಗಿಸಲಾಗಿದೆ.

ರಾಣೆ ವಿವಾದಾತ್ಮಕ ಹೇಳಿಕೆಯೇನು?

'ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷದ ಬಗ್ಗೆ ಗೊತ್ತಿಲ್ಲ ಎಂದು ರಾಣೆ ಇತ್ತೀಚೆಗೆ ಕಿಡಿಕಾರಿದ್ದರು. ಸಿಎಂಗೆ ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಅವರು ತಮ್ಮ ಭಾಷಣದ ಸಮಯದಲ್ಲಿ ಸ್ವಾತಂತ್ರ್ಯದ ವರ್ಷದ ಬಗ್ಗೆ ವಿಚಾರಿಸಲು ಹಿಂದಕ್ಕೆ ಸರಿದರು. ನಾನು ಅಲ್ಲಿದ್ದಿದ್ದರೆ ಅವನಿಗೆ ಒಂದು ಕಪಾಳಕ್ಕೆ ಹೊಡೆಯುತ್ತಿದ್ದೆ' ಎಂದು ರಾಣೆ ನಿನ್ನೆ ರಾಯಗಢ ಜಿಲ್ಲೆಯ ಜನಾಶೀರ್ವಾದ ಯಾತ್ರೆಯಲ್ಲಿ ಹೇಳಿದ್ದರು.

ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ.. ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ 42 FIR ದಾಖಲು..

ಶಿವಸೇನೆ ಆಕ್ರೋಶ

ರಾಣೆ ಅವರ ಹೇಳಿಕೆಗೆ ಶಿವಸೇನೆ ತೀವ್ರ ಆಕ್ರೋಶದ ಜೊತೆಗೆ ತೀಕ್ಷ್ಣವಾಗಿ ತಿರುಗೇಟು ನೀಡಿತ್ತು. ಕೇಂದ್ರ ಸಚಿವ ರಾಣೆ ವಿರುದ್ಧ ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಹಲವಾರು ಪೋಸ್ಟರ್‌ಗಳನ್ನು ಹಾಕಲಾಗಿದ್ದು,'ಕೊಂಬಿಡಿ ಚೋರ್' (ಕೋಳಿ ಕಳ್ಳ) ಎಂದು ಕರೆದಿದ್ದಾರೆ. ಐದು ದಶಕಗಳ ಹಿಂದೆ ಚೆಂಬೂರಿನಲ್ಲಿ ನಾರಾಯಣ ರಾಣೆ ಅವರು ನಡೆಸುತ್ತಿದ್ದ ಕೋಳಿ ಅಂಗಡಿಯನ್ನು ಪೋಸ್ಟ್‌ರ್‌ಗಳಲ್ಲಿ ಉಲ್ಲೇಖಿಸಲಾಗಿದೆ.

'ಬಿಜೆಪಿ ಮೆಚ್ಚಿಸಲು ಹೇಳಿಕೆ'

ಸಚಿವ ರಾಣೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಶಿವಸೇನೆಯ ರತ್ನಗಿರಿ-ಸಿಂಧುದುರ್ಗದ ಸಂಸದ ವಿನಾಯಕ್ ರಾವುತ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕತ್ವವನ್ನು ಮೆಚ್ಚಿಸಲು, ರಾಣೆ ಶಿವಸೇನೆ ಮತ್ತು ಅದರ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ. ಮೋದಿ ನೇತೃತ್ವದ ಸಚಿವಾಲಯಕ್ಕೆ ಸೇರ್ಪಡೆಗೊಂಡ ನಂತರ ಅವರು ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

Last Updated : Aug 24, 2021, 10:17 AM IST

ABOUT THE AUTHOR

...view details