ಕರ್ನಾಟಕ

karnataka

ETV Bharat / bharat

ರೈತರ ನ್ಯಾಯ ಸಮ್ಮತ ಬೇಡಿಕೆ ಆಲಿಸದೆ ಕೇಂದ್ರದ ಜಾಣ ಕುರುಡುತನ: ಪ್ರಿಯಾಂಕಾ ಗಾಂಧಿ

ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

By

Published : Jan 2, 2021, 10:47 PM IST

Updated : Jan 3, 2021, 8:33 AM IST

Priyanka Gandhi
ಪ್ರಿಯಾಂಕಾ ಗಾಂಧಿ

ನವದೆಹಲಿ:ಕೃಷಿ ಕಾನೂನುಗಳ ವಿರುದ್ಧ ರೈತರು ನ್ಯಾಯ ಸಮ್ಮತ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈಗಾಗಲೇ ಕೆಲ ರೈತರು ಸಾವನ್ನಪ್ಪಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರೈತರ ಬಗ್ಗೆ ಸಂವೇದನೆ ತೋರುತ್ತಿಲ್ಲ. ಚಳಿಗಾಲದ ಸಮಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದು ನಿಜಕ್ಕೂ ಆಘಾತಕಾರಿ. ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವ ಮಾಹಿತಿ ಪ್ರಕಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುಮಾರು 57 ರೈತರು ಅನಾರೋಗ್ಯಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಓದಿ: ಕೋವಿಡ್​ ಲಸಿಕೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ: ಅಖಿಲೇಶ್ ಹೇಳಿಕೆಗೆ ಓಮರ್ ಅಬ್ದುಲ್ಲಾ ಪ್ರತಿಕ್ರಿಯೆ!

ಕಳೆದೊಂದು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಜಾಣ ಕುರುಡುತನ ಮೆರೆಯುತ್ತಿದೆ ಎಂದಿದ್ದಾರೆ.

ಡಿಸೆಂಬರ್​ 28,2020ರಂದು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ, ಸರ್ಕಾರ ರೈತರ ಸಮಸ್ಯೆ ಆಲಿಸಿ, ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಆಗ್ರಹಿಸಿದ್ದರು.

Last Updated : Jan 3, 2021, 8:33 AM IST

ABOUT THE AUTHOR

...view details