ಕರ್ನಾಟಕ

karnataka

ETV Bharat / bharat

ಬ್ಯಾಂಕ್​, ವಿಮಾ ಕಂಪನಿ ಉದ್ಯೋಗಿಗಳಿಗೆ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರದ ಪತ್ರ - ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ಕೊರೊನಾ ಮಹಾಮಾರಿ ಸಂದರ್ಭದಲ್ಲೂ ಬ್ಯಾಂಕಿಂಗ್​ ವಲಯದ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳಿಗೆ ಪತ್ರ ಬರೆದಿದೆ.

staff of banks
staff of banks

By

Published : May 14, 2021, 6:31 PM IST

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟ ಮುಂದುವರೆದಿದೆ. ಈಗಾಗಲೇ ಫ್ರಂಟ್​ಲೈನ್​ ಕಾರ್ಯಕರ್ತರು ಸೇರಿ ಜನಸಾಮಾನ್ಯರಿಗೂ ಲಸಿಕೆ ನೀಡಲಾಗ್ತಿದೆ. ಇದರ ಮಧ್ಯೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಪತ್ರ ಬರೆದಿದೆ.

ಬ್ಯಾಂಕ್​, ವಿಮಾ ಕಂಪನಿ, ವ್ಯಾಪಾರ ಪ್ರತಿನಿಧಿಗಳು ಮತ್ತು ಇತರೆ ಹಣಕಾಸು ಸೇವಾ ಪೂರೈಕೆದಾರ ಸಿಬ್ಬಂದಿಗೆ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ತಿಳಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ರಾಜ್ಯ ಸರ್ಕಾರಕ್ಕೆ ಈ ಪತ್ರ ಬರೆದಿದ್ದು, ಈ ಕಷ್ಟದ ಸಮಯದಲ್ಲೂ ಅವರು ಹೆಚ್ಚಿನ ಅಪಾಯಕ್ಕೊಳಗಾಗಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ:ಪಂಜಾಬ್​ನ 23ನೇ ಜಿಲ್ಲೆಯಾಗಿ ಮಲೆರ್​ಕೋಟ್ಲಾ ಘೋಷಣೆ.. ₹500 ಕೋಟಿ ಅನುದಾನ ಘೋಷಿಸಿದ ಸಿಎಂ

ಕೋವಿಡ್ ಸವಾಲಿನ ಸಮಯದಲ್ಲಿ ಅಗತ್ಯವಿರುವ ಜನರಿಗೆ ಬ್ಯಾಂಕಿಂಗ್​ ಮತ್ತು ಹಣಕಾಸು ಸೇವೆ ನಿರಂತರವಾಗಿ ತಲುಪಿಸುವಲ್ಲಿ ಸಿಬ್ಬಂದಿ ಕಾರ್ಯಮಗ್ನರಾಗಿದ್ದಾರೆ ಎಂದು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಡೆಬಾಶಿಶ್ ಪಾಂಡಾ ತಿಳಿಸಿದ್ದಾರೆ. ಈ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಆದ್ಯತೆ ಮೇರೆಗೆ ಲಸಿಕೆ ಹಾಕುವುದು ಸಾರ್ವಜನಿಕ ಸೇವೆಯ ವಿತರಣೆಯಲ್ಲಿ ಅಪಾಯ ಕಡಿಮೆ ಮಾಡುತ್ತದೆ ಎಂದಿದ್ದಾರೆ.

ABOUT THE AUTHOR

...view details