ಕರ್ನಾಟಕ

karnataka

ETV Bharat / bharat

ತಮಿಳುನಾಡು ಕಾರು ಸ್ಫೋಟ, ಎನ್​ಐಎ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ತಮಿಳುನಾಡು ಕಾರು ಸ್ಫೋಟ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್​ಐಎ ತನಿಖೆಗೆ ವಹಿಸಿದೆ.

By

Published : Oct 27, 2022, 3:49 PM IST

centre-orders-nia-probe-into-tamilnadu-car-blast
ಎನ್​ಐಎ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ:ತಮಿಳುನಾಡಿನ ಕೊಯಮತ್ತೂರಿನ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ)ಗೆ ಕೇಂದ್ರ ಸರ್ಕಾರ ವಹಿಸಿದೆ. ಸ್ಫೋಟದಲ್ಲಿ ಭಯೋತ್ಪಾದನೆಯ ನಂಟು, ನೆರಳು ಗೋಚರಿಸಿದ್ದು ಸ್ಟಾಲಿನ್​ ಸರ್ಕಾರ ನಿನ್ನೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ಶಿಫಾರಸು ಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಶೀಘ್ರವಾಗಿ ಪ್ರಕರಣ ಬೇಧಿಸಲು ಸೂಚಿಸಿದೆ.

ಪ್ರಕರಣವೇನು?:ಕೊಯಮತ್ತೂರಿನ ಉಕ್ಕಡಂ ಪ್ರದೇಶದಲ್ಲಿ ಅ.23 ರಂದು ಕಾರಿನಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟವಾಗಿತ್ತು. ಇದರಲ್ಲಿ ಓರ್ವ ಮೃತಪಟ್ಟಿದ್ದ. ಪ್ರಕರಣದಲ್ಲಿ ಭಯೋತ್ಪಾದಕರ​ ಕರಿನೆರಳು ಕಂಡು ಬಂದಿದ್ದು ಯುಎಪಿಎ ಕಾಯ್ದೆಯಡಿ ಕೇಸು ದಾಖಲಿಸಿಕೊಂಡು 6 ಜನರನ್ನು ಪೊಲೀಸರು ಬಂಧಿಸಿದ್ದರು.

ಮೃತಪಟ್ಟ ವ್ಯಕ್ತಿ ಇಂಜಿನಿಯರಿಂಗ್ ಪದವೀಧರನಾಗಿದ್ದು, 2019 ರಲ್ಲಿ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಎನ್‌ಐಎ ಈ ಹಿಂದೆ ವಿಚಾರಣೆ ನಡೆಸಿತ್ತು. ಬಂಧಿತರ ನಿವಾಸಗಳ ಮೇಲೆ ವಿವಿಧೆಡೆ ದಾಳಿ ನಡೆಸಿದ ಎಸ್​ಐಟಿ ತಂಡ ಶೋಧ ನಡೆಸಿ, ಸ್ಫೋಟಕಗಳನ್ನು ತಯಾರಿಸಲು ಬಳಸುವ 75 ಕೆಜಿ ಪೊಟ್ಯಾಷಿಯಂ ನೈಟ್ರೇಟ್, ಇದ್ದಿಲು, ಅಲ್ಯೂಮಿನಿಯಂ ಪೌಡರ್ ಮತ್ತು ಗಂಧಕ, ಲ್ಯಾಪ್​ಟಾಪ್​ ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ:ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಅ. 31ರಂದು ಬಂದ್​ಗೆ ಕರೆ ನೀಡಿದ ಬಿಜೆಪಿ, ಹಿಂದೂ ಸಂಘಟನೆಗಳು

ABOUT THE AUTHOR

...view details