ರಾಯಪುರ:ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ 5 ಲಕ್ಷ ರೂ.ಗಳ ಬಹುಮಾನ ಘೋಷಿಸಿದ್ದ ನಕ್ಸಲ್ನನ್ನು ಎನ್ಕೌಂಟರ್ನಲ್ಲಿ ಪೊಲೀಸರು ಹೊಡೆದುರುಳಿಸಿದ್ದಾರೆ.
ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ದಾಳಿ ನಡೆಸಿ 22 ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ ಹದಿನೈದು ದಿನಗಳ ನಂತರ ಈ ಎನ್ಕೌಂಟರ್ ನಡೆದಿದೆ. ಬೆಳಗ್ಗೆ 6 ಗಂಟೆಗೆ ನೀಲವಾಯದ ಕಾಡಿನಲ್ಲಿ ರಾಜ್ಯ ಪೊಲೀಸರು, ಮುಂಚೂಣಿ ನಕ್ಸಲ್ ವಿರೋಧಿ ಪಡೆ, ಜಿಲ್ಲಾ ರಿಸರ್ವ್ ಗಾರ್ಡ್ ಸಿಬ್ಬಂದಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ನಕ್ಸಲ್ ಹತ್ಯೆಯಾಗಿದ್ದಾನೆ ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದರು.