ಕರ್ನಾಟಕ

karnataka

By

Published : Dec 8, 2021, 6:16 PM IST

Updated : Dec 8, 2021, 10:54 PM IST

ETV Bharat / bharat

Big Breaking: ಚಿಕಿತ್ಸೆ ಫಲಕಾರಿಯಾಗದೇ ಬಿಪಿನ್​ ರಾವತ್​​ ನಿಧನ

ಬಿಪಿನ್​ ರಾವತ್​​ ಸೇರಿದಂತೆ 14 ಜನರು ಪ್ರಯಾಣ ಮಾಡ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕನೂರ್​​ನಲ್ಲಿ ಪತನಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಸೇನಾಪಡೆಗಳ ಮುಖ್ಯಸ್ಥರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

General Bipin Rawat dies
General Bipin Rawat dies

ಚೆನ್ನೈ(ತಮಿಳುನಾಡು):ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನಗೊಂಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸೇನಾ ಮುಖ್ಯಸ್ಥರನ್ನ ಸ್ಥಳೀಯ ವೆಲ್ಲಿಂಗ್ಟನ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ತಮಿಳುನಾಡಿನ ನೀಲಗಿರಿಯ ಕನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸೇನಾಪಡೆಗಳ ಮುಖ್ಯಸ್ಥರು ಸಾವಿಗೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಸೇನೆ ದೃಢಪಡಿಸಿದೆ.

ಟ್ವೀಟ್​ ಮೂಲಕ ಮಾಹಿತಿ ನೀಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11 ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್​​​ನಲ್ಲಿ ಉಪನ್ಯಾಸ ನೀಡಲು ರಾವತ್​ ತಮ್ಮ ಪತ್ನಿ ಹಾಗೂ ಸೇನಾ ಸಿಬ್ಬಂದಿ ಜೊತೆ ತೆರಳುತ್ತಿದ್ದರು. ಈ ವೇಳೆ ನೀಲಗಿರಿ ಕನೂರ್​​​ ಸಮೀಪ ಹೆಲಿಕಾಪ್ಟರ್​ ಪತನಗೊಂಡಿತ್ತು.ಘಟನೆಯಲ್ಲಿ ಗಾಯಗೊಂಡಿರುವ ಗ್ರೂಪ್​ ಕ್ಯಾಪ್ಟನ್​ ವರುಣ್​​ ಸಿಂಗ್​​ ಎಸ್​​ಸಿ ವೆಲ್ಲಿಂಗ್ಟನ್​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೆಲಿಕಾಪ್ಟರ್​ ಪತನಗೊಳ್ಳಲು ಏನು ಕಾರಣ ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.

ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಕೂಡ ಟ್ವೀಟ್ ಮಾಡಿದ್ದು, ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ರಕ್ಷಣ ಸಿಬ್ಬಂದಿ ಮುಖ್ಯಸ್ಥ ಬಿಪಿನ್​​ ರಾವತ್​​​ ಅವರ ಪತ್ನಿ ಸೇರಿದಂತೆ ಇತರೆ 11 ಮಂದಿ ನಿಧನರಾಗಿದ್ದಾರೆಂದು ತಿಳಿಸಿದ್ದಾರೆ.

Last Updated : Dec 8, 2021, 10:54 PM IST

ABOUT THE AUTHOR

...view details