ಕರ್ನಾಟಕ

karnataka

By

Published : Jan 2, 2023, 3:27 PM IST

ETV Bharat / bharat

ನಳಂದದಲ್ಲಿ ಹಳೇ ದ್ವೇಷಕ್ಕೆ ಐದು ತಿಂಗಳ ಮಗು ಬಲಿ

ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡ ಐದು ತಿಂಗಳ ಮಗು ಸಾವು- ನಳಂದದಲ್ಲಿ ಘಟನೆ- ದಾಳಿಯಲ್ಲಿ ಇತರ ನಾಲ್ವರಿಗೆ ಗಾಯ

child becomes-victim-of-old-rivalry-in-nalanda
ನಳಂದದಲ್ಲಿ ಹಳೇ ದ್ವೇಷಕ್ಕೆ ಐದು ತಿಂಗಳ ಮಗು ಬಲಿ

ನಳಂದ(ಬಿಹಾರ):ಹಳೆ ದ್ವೇಷಕ್ಕೆ ಐದು ತಿಂಗಳ ಮಗು ಬಲಿಯಾಗಿದೆ. ದುಷ್ಕರ್ಮಿಗಳು ಒಂದೇ ಕುಟುಂಬದ ಐವರ ಮೇಲೆ ದೊಣ್ಣೆ ಹಾಗೂ ರೈಫಲ್​​ನಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ಐದು ತಿಂಗಳ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ.

ನಳಂದದ ಪಾವಪುರಿ ಪ್ರದೇಶದಲ್ಲಿರುವ ವರ್ಧಮಾನ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಕುಟುಂಬದ ಇತರ ಸದಸ್ಯರಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ಬಳಿಕ ದುಷ್ಕರ್ಮಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ನವಜಾತ ಶಿಶುವು ವೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಚಂದೌರಾ ಗ್ರಾಮದ ಬಳಿರಾಮ್ ಪಾಸ್ವಾನ್ ಅವರದ್ದಾಗಿದೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಬಲಿರಾಮ್ ಪಾಸ್ವಾನ್, “ನನ್ನ ಐದು ತಿಂಗಳ ಮಗು ಸೇರಿ ನಾಲ್ಕೈದು ಜನರ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ, ನಮ್ಮ ಮೇಲೆ ರೈಫಲ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕಳುಹಿಸಲು ವಾಹನದ ವ್ಯವಸ್ಥೆ ಮಾಡಿದರು' ಎಂದು ತಿಳಿಸಿದ್ದಾರೆ.

ವೆನಾ ಪೊಲೀಸ್ ಠಾಣೆ ಎಸ್‌ಹೆಚ್‌ಒ ಮುಖೇಶ್ ಕುಮಾರ್ ಶ್ರೀವಾಸ್ತವ್​ ಪ್ರತಿಕ್ರಿಯಿಸಿ, 'ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಹಳೇ ದ್ವೇಷವೇ ಘಟನೆಗೆ ಕಾರಣ ಅಂತಾ ಗೊತ್ತಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ.. ಬೆಚ್ಚಿಬಿದ್ದ ಬೆಂಗಳೂರು

ABOUT THE AUTHOR

...view details