ಕರ್ನಾಟಕ

karnataka

By

Published : Aug 25, 2021, 9:11 PM IST

ETV Bharat / bharat

ಲವರ್​ನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು!

ಮದುವೆ ಪ್ರಸ್ತಾಪ ತಿರಸ್ಕಾರ ಮಾಡಿದ್ದಕ್ಕಾಗಿ ಕಾಲೇಜ್​ ವಿದ್ಯಾರ್ಥಿನಿ ಮೇಲೆ ಯುವಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಕೆ ಸಾವನ್ನಪ್ಪಿದ್ದಾಳೆ.

College girl
College girl

ಲಖಿಂಪುರ್​(ಅಸ್ಸೋಂ):ಲವರ್​ನಿಂದ ಹಲ್ಲೆಗೊಳಗಾಗಿದ್ದ ಕಾಲೇಜ್​​ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಅಸ್ಸೋಂನ ಲಖಿಂಪುರ್​ದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಆಗಸ್ಟ್​​ 24ರಂದು ವಿದ್ಯಾರ್ಥಿನಿ ನಂದಿತಾ ಸೈಕಿಯಾ ಮೇಲೆ ಆಕೆಯ ಲವರ್​ ರಿಂಟು ಶರ್ಮಾ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನ ಧೇಮಾಜಿ ಸಿವಿಲ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ತೀವ್ರ ರಕ್ತಸ್ರಾವವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದಿಬ್ರುಗಢ​ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಸಾವನ್ನಪ್ಪಿರುವ ವಿದ್ಯಾರ್ಥಿನಿ ನಂದಿನಿ

ಇದನ್ನೂ ಓದಿರಿ: ಅಂತ್ಯಕ್ರಿಯೆ ವೇಳೆ ಹೆಂಡತಿ ಚಿತೆಗೆ ಹಾರಿ ಪ್ರಾಣಬಿಟ್ಟ ಗಂಡ!

ನಂದಿತಾ ಮರಿಧಾಲ್​ ಕಾಲೇಜ್​ನಲ್ಲಿ ಬಿಎ ಮೂರನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಆಕೆಯ ಸ್ನೇಹಿತೆ ಹಾಗೂ ತಂದೆ ಜೊತೆ ಬಸ್​ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಹಲ್ಲೆ ನಡೆಸಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ರಿಂಟು ಶರ್ಮಾಗೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ನಡೆಯುವುದಕ್ಕೂ ಕೆಲ ದಿನಗಳ ಮುಂಚೆ ರಿಂಟು ಯುವತಿ ನಂದಿತಾ ಮನೆಗೆ ಭೇಟಿ ನೀಡಿ, ಮದುವೆ ವಿಷಯ ಪ್ರಸ್ತಾಪ ಮಾಡಿದ್ದನು. ಇದನ್ನ ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡಿದ್ದ ಯುವಕ ಈ ರೀತಿಯಾಗಿ ನಡೆದುಕೊಂಡಿದ್ದಾನೆಂದು ತಿಳಿದು ಬಂದಿದೆ.

ABOUT THE AUTHOR

...view details