ಚಂಡಿಗಢ:ಯೋಗ ಗುರು ಬಾಬಾ ರಾಮ್ದೇವ್ ಅವರ ಹೇಳಿಕೆ ದಿನೇದಿನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಂಡೀಗಢ ಜಿಲ್ಲಾ ವಕೀಲರ ಸಂಘದ ಮಾಜಿ ಮುಖ್ಯಸ್ಥ ರವೀಂದ್ರ ಸಿಂಗ್ ಬಾಸ್ಸಿ, ವಕೀಲ ವಿನೋದ್ ಕುಮಾರ್ ವರ್ಮಾ ಮೂಲಕ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಮ್ದೇವ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ರವೀಂದ್ರ ಸಿಂಗ್ ಬಾಸ್ಸಿ, ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿಯಿದೆ. ಈ ಸಮಯದಲ್ಲಿ ಬಾಬಾ ರಾಮ್ದೇವ್ ಅಲೋಪತಿ ವಿಧಾನದ ವಿರುದ್ಧ ಹೇಳಿಕೆ ನೀಡುವುದು ಸಮಂಜಸವಲ್ಲ. ವೈದ್ಯರು ತಮ್ಮ ಜೀವದ ಬಗ್ಗೆ ಕಾಳಜಿ ವಹಿಸದೇ ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.