ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ: ಮೋದಿ ವಿರುದ್ಧ ಕ್ರಮಕ್ಕೆ ಚು.ಆಯೋಗಕ್ಕೆ ಮನವಿ - ಚುನಾವಣಾ ಆಯೋಗ

ಬಳ್ಳಾರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ, ವೋಟ್ ಬ್ಯಾಂಕ್​ಗಾಗಿ ತುಷ್ಟೀಕರಣ ಮಾಡುವ ಕಾಂಗ್ರೆಸ್ ಪಕ್ಷವು ಭಯೋತ್ಪಾದನೆಯ ಮುಂದೆ ಸಂಪೂರ್ಣವಾಗಿ ಶರಣಾಗಿದೆ ಎಂದಿದ್ದರು.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ

By

Published : May 7, 2023, 9:39 AM IST

ನವದೆಹಲಿ: ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಭಯೋತ್ಪಾದನೆಯನ್ನು ರಕ್ಷಿಸುತ್ತದೆ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಭಾರತ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಶುಕ್ರವಾರ ಬಳ್ಳಾರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮೋದಿ ಆರೋಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, ಚುನಾವಣೆಯ ವಾತಾವರಣ ಹಾಳು ಮಾಡಲು ದುರುದ್ದೇಶಪೂರಿತ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಮೋದಿ ಅವರು ಲಕ್ಷ್ಮಣ ರೇಖೆ ದಾಟಿದ್ದಾರೆ ಎಂದು ಆರೋಪಿಸಿದೆ.

ಕರ್ನಾಟಕದಲ್ಲಿದ್ದ ಒಳ್ಳೆಯ ವಾತಾವರಣವನ್ನು ಧ್ರುವೀಕರಣಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಉನ್ನತ ನಾಯಕರ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ದೂರಿದೆ. ಕಾಂಗ್ರೆಸ್ ಭಯೋತ್ಪಾದನೆಯ ಮುಂದೆ ಕಾಂಗ್ರೆಸ್​ ಸಂಪೂರ್ಣ ಶರಣಾಗಿದೆ. ಅದನ್ನು ಸಂರಕ್ಷಿಸಿ, ಆಶ್ರಯ ನೀಡುತ್ತಿದೆ ಎಂದು ಮೋದಿ ಟೀಕಾಸಮರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಕೆ.ಸಿ.ವೇಣುಗೋಪಾಲ್ ಅವರು ಚು.ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕೇವಲ ಲಕ್ಷ್ಮಣ ರೇಖೆಯನ್ನಷ್ಟೇ ಅವರು ದಾಟಿಲ್ಲ. ಹಿಂದಿನ ಸಂಪ್ರದಾಯಗಳನ್ನೂ ಮುರಿದಿದ್ದಾರೆ. ಚುನಾವಣಾ ಆಯೋಗವು ಇದನ್ನು ಪರಿಶೀಲಿಸದೆ, ಉತ್ತರಿಸದೆ ಮತ್ತು ಶಿಕ್ಷಿಸದೆ ಇರಲು ಸಾಧ್ಯವಿಲ್ಲ ಎಂದು ಮನವಿ ಮಾಡಲಾಗಿದೆ.

ದೇಶದ ಪ್ರಧಾನಿ ಸುಳ್ಳು ಮತ್ತು ಅಮಾನುಷ ಆರೋಪಗಳನ್ನು ಮಾಡುವ ಮೂಲಕ ಮತದಾರರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ. ಭಾರತ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮತ್ತು ಸಂಸತ್ತಿನಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್,​ ಭಯೋತ್ಪಾದಕರನ್ನು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂಬ ಪ್ರಧಾನಿ ಆರೋಪವನ್ನು ಖಂಡಿಸುವ ಜತೆಗೆ ವಿವರವನ್ನು ಕೈ ನಾಯಕರು ಆಯೋಗಕ್ಕೆ ಒದಗಿಸಿದ್ದಾರೆ.

ರಾಜ್ಯದ 224 ವಿಧಾನಸಭಾ ಸ್ಥಾನಗಳಿಗೆ ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂಓದಿ:ಒಂದೇ ದಿನ ₹15 ಕೋಟಿ ನಗದು, ₹7 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ABOUT THE AUTHOR

...view details