ಕರ್ನಾಟಕ

karnataka

By

Published : Aug 11, 2023, 9:55 AM IST

Updated : Aug 11, 2023, 10:04 AM IST

ETV Bharat / bharat

ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅಮಾನತು.. ಸಭೆ ಕರೆದ ಸೋನಿಯಾ ಗಾಂಧಿ

ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅವರನ್ನು ಅಮಾನತುಗೊಳಿಸಿರುವ ಬಗ್ಗೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಇಂದು ಸಭೆ ಕರೆದಿದ್ದಾರೆ.

Congress calls meeting of its Lok Sabha MPs  discuss suspension of LoP  LoP Adhir Ranjan Chowdhury  ಸಭೆ ಕರೆದ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ  ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅಮಾನತು  ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ  ರಂಜನ್​ ಚೌಧರಿ ಅವರನ್ನು ಅಮಾನತು  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ  ಪಕ್ಷದ ಲೋಕಸಭೆ ಸಂಸದರನ್ನು ಸಭೆ
ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅಮಾನತು

ನವದೆಹಲಿ:ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮ ಪಕ್ಷದ ಲೋಕಸಭೆ ಸಂಸದರ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಅಧೀರ್ ರಂಜನ್ ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ. ಪಶ್ಚಿಮ ಬಂಗಾಳದ ಬರ್ಹಾಂಪೋರ್ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಪದೇ ಪದೆ ಸದನದ ನಿಯಮಾವಳಿಗಳನ್ನ ಉಲ್ಲಂಘಿಸುತ್ತಿದ್ದಾರೆ ಹಾಗೂ ಅಶಿಸ್ತು ತೋರಿಸುತ್ತಿದ್ದಾರೆ ಎಂಬ ಕಾರಣದಿಂದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ನಿನ್ನೆ ಅಮಾನತು ನಿರ್ಣಯ ಮಂಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವರು ಮಾತನಾಡುವಾಗ ಅಥವಾ ಚರ್ಚೆ ನಡೆಯುತ್ತಿರುವಾಗ ಚೌಧರಿ ಅವರು ಸದನಕ್ಕೆ ಅಡ್ಡಿಪಡಿಸುತ್ತಾರೆ ಎಂದು ಜೋಶಿ ನಿರ್ಣಯದಲ್ಲಿ ಆರೋಪಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಡಿಸಿದ ನಿರ್ಣಯವನ್ನು ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತ್ತು.

ಮಣಿಪುರ ಹಿಂಸಾಚಾರದ ವಿಷಯದ ಕುರಿತು ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷದ ನಾಯಕರು ವಾಗ್ದಾಳಿ ನಡೆಸಿದ್ದರು. ಅದರಂತೆ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಹ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಮಾನತು ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ನೀರವ್ ಎಂದರೆ ಮೌನವಾಗಿರುವುದು ಎಂದರ್ಥ. ಪ್ರಧಾನಿ ನರೇಂದ್ರ ಮೋದಿಯನ್ನು ಅವಮಾನಿಸುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದಾರೆ.

ನಾನು ಪ್ರಧಾನಿ ಮೋದಿ ಅವರು ಮಣಿಪುರ ವಿಷಯದ ಬಗ್ಗೆ ಮೌನವಾಗಿ ಕುಳಿತಿದ್ದಾರೆ ಎಂದಿದ್ದೆ. ನೀರವ ಎಂದರೆ ಮೌನವಾಗಿರುವುದು. ನನ್ನ ಉದ್ದೇಶ ಪ್ರಧಾನಿ ಮೋದಿ ಅವರನ್ನು ಅವಮಾನಿಸುವುದಾಗಿರಲಿಲ್ಲ . ಪ್ರಧಾನಿ ಮೋದಿ ಅವರನ್ನು ಅವಮಾನಿಸಲಾಗಿದೆ ಎಂದು ಭಾವಿಸಬೇಡಿ. ತಮ್ಮ ಅಮಾನತು ವಿಷಯವನ್ನು ವಿಶೇಷಾಧಿಕಾರ ಸಮಿತಿಗೆ ವಹಿಸಲಾಗಿದೆ ಎಂದು ಅಧೀರ್​ ರಂಜನ್​ ಚೌಧರಿ ಹೇಳಿದರು.

ಪ್ರಧಾನಿ ಮೋದಿ ಅವರು ಪ್ರತಿದಿನ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರನ್ನು ಅವಮಾನಿಸುತ್ತಿದ್ದಾರೆ. ಅಷ್ಟೇ ಅಲ್ಲ ಅವರು ದಾಖಲೆಗಳಿಲ್ಲದೇ ಅವರೆಲ್ಲರನ್ನೂ ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ನೂರು ಬಾರಿ ಪ್ರಧಾನಿಯಾದರೂ ನಮ್ಮ ಅಭ್ಯಂತರವಿಲ್ಲ. ನಾನು ಶಿಕ್ಷೆಯನ್ನು ಎದುರಿಸಲು ಸಿದ್ಧವಾಗಿದ್ದೇನೆ. ನಾನು ಪ್ರಧಾನಿ ಮೋದಿ ಅವರನ್ನು ಅವಮಾನಿಸುವ ಯಾವುದೇ ಪ್ರಯತ್ನ ಮಾಡಿಲ್ಲ ಎಂಬುದನ್ನು ದೇಶದ ನಾಗರಿಕರು ತಿಳಿದುಕೊಳ್ಳಬೇಕು ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಓದಿ:PM Modi: 'ಸುಳ್ಳಿನ ಬಜಾರಿನಲ್ಲಿ ಲೂಟಿಯ ಅಂಗಡಿ': ರಾಹುಲ್​ 'ಮೊಹಬ್ಬತ್ ಕಿ ದುಕಾನ್'​ಗೆ ಮೋದಿ ಟಾಂಗ್​- ವಿಡಿಯೋ

Last Updated : Aug 11, 2023, 10:04 AM IST

ABOUT THE AUTHOR

...view details