ಚಂಡೀಗಢ(ಪಂಜಾಬ್): ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಕುಟುಂಬದ ಸದಸ್ಯರನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗುವ ಸಾಧ್ಯತೆ ಇದೆ. ನಾಳೆ ಚಂಡೀಗಢದ ಮಾನ್ಸಾದಲ್ಲಿ ಅವರನ್ನ ಭೇಟಿಯಾಗಲಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಕುಟುಂಬದ ಸದಸ್ಯರನ್ನ ಈಗಾಗಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ಮಾಡಿದ್ದು, ಸಾಂತ್ವನ ಹೇಳಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿ ಕೂಡ ಈ ಕೆಲಸ ಮಾಡಲಿದ್ದಾರೆ.