ಕರ್ನಾಟಕ

karnataka

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿದ ರಾಹುಲ್​ ಗಾಂಧಿ

By

Published : Jun 7, 2022, 12:56 PM IST

ಕಳೆದ ಕೆಲ ದಿನಗಳ ಹಿಂದೆ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ​ ಕುಟುಂಬದ ಸದಸ್ಯರನ್ನ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.

Congress leader Rahul Gandhi met late Sidhu Moose Wala family, Congress leader Rahul Gandhi visit to Mansa,  late Sidhu Moose Wala news, Congress leader Rahul Gandhi news, ದಿವಂಗತ ಸಿಧು ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನಸಾಗೆ ಭೇಟಿ, ದಿವಂಗತ ಸಿಧು ಮೂಸೆವಾಲಾ ಸುದ್ದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿ,
ರಾಹುಲ್​ ಗಾಂಧಿ

ಚಂಡೀಗಢ (ಪಂಜಾಬ್​):ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕುಟುಂಬದ ಸದಸ್ಯರನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ. ಚಂಡೀಗಢದ ಮಾನ್ಸಾದಲ್ಲಿ ರಾಹುಲ್​ ಗಾಂಧಿ ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬದ ಸದಸ್ಯರನ್ನ ಈಗಾಗಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿ ಕೂಡ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಓದಿ:ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ: ರಾಹುಲ್ ಗಾಂಧಿ

ಮೇ 29ರಂದು ಪಂಜಾಬ್​ನಲ್ಲಿ ಸಿಧು ಮೂಸೆವಾಲಾ​ ಹತ್ಯೆ ನಡೆದಿತ್ತು. ಈ ಪ್ರಕರಣ ಪಂಜಾಬ್ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಬಣ್ಣ ಸಹ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್​ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊಸೆ ವಾಲಾ ಹತ್ಯೆ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್​ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ABOUT THE AUTHOR

...view details