ಕರ್ನಾಟಕ

karnataka

By

Published : Feb 16, 2021, 6:31 PM IST

Updated : Feb 16, 2021, 7:26 PM IST

ETV Bharat / bharat

ರಾಹುಲ್​ ಗಾಂಧಿ ಭೇಟಿ ಮಾಡಿ ಈ ಬೇಡಿಕೆ ಮುಂದಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ!

ದೆಹಲಿ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಹುಲ್​ ಗಾಂಧಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

Siddaramaiah met Congress leader Rahul
Siddaramaiah met Congress leader Rahul

ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಲವೊಂದು ಮಹತ್ವದ ವಿಚಾರ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತು

ದೆಹಲಿಗೆ ಬಂದು 13 ತಿಂಗಳಾಗಿದ್ದು, ಪಕ್ಷ ಸಂಘಟನೆ ವಿಚಾರವಾಗಿ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕಾಗಿ ಯಾವೆಲ್ಲ ರೂಪುರೇಷೆ ರಚನೆ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್​ ಗಾಂಧಿ ಮತ್ತೊಂದು ಅವಧಿಗೆ ಅಧಿಕಾರ ವಹಿಸಿಕೊಳ್ಳುವಂತೆ ಕೂಡಾ ಮನವಿ ಮಾಡಿದ್ದೇನೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.

ಓದಿ: ರಾಹುಲ್​ ಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದ ಸಿದ್ಧರಾಮಯ್ಯ

ರಾಹುಲ್ ಗಾಂಧಿ ಭೇಟಿಗೂ ಮುಂಚಿತವಾಗಿ ಮಾತನಾಡಿದ್ದ ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿ ವೇಳೆ ಕರ್ನಾಟಕ, ದೇಶದ ರಾಜಕೀಯ ಬಗ್ಗೆ ಚರ್ಚೆ ರಾಜ್ಯದಲ್ಲಿನ ಅಹಿಂದ ಹೋರಾಟ ಹಾಗೂ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದರು.

Last Updated : Feb 16, 2021, 7:26 PM IST

ABOUT THE AUTHOR

...view details