ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸೋಂ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಪ್ರಚಾರವನ್ನು ದೊಡ್ಡ ಮಟ್ಟದಲ್ಲಿ ಆರಂಭಿಸುವ ಉದ್ದೇಶದಿಂದ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಜಿ -23 ನಾಯಕರನ್ನು ಸೇರಿಸಿಕೊಂಡಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಜಿ -23 ನಾಯಕರನ್ನು ಸೇರಿಸಿಕೊಳ್ಳುವುದು ಅಥವಾ ಬಿಡುವುದು ಹೈಕಮಾಂಡ್ಗೆ ಬಿಟ್ಟದ್ದು, ಈಗಾಗಲೇ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ 30 ನಾಯಕರ ಹೆಸರನ್ನು ಘೋಷಿಸಲಾಗಿದೆ. ಅವರ ಪ್ರಚಾರದಿಂದಲೇ ಚುನಾವಣೆ ಗೆಲ್ಲಬಹುದು ಎಂದು ಭಾವಿಸಲಾಗಿದೆ. ಇದು ಒಳ್ಳೆಯ ವಿಚಾರ, ಇತರ ನಾಯಕರ ಅವಶ್ಯಕತೆ ಏನಿಲ್ಲಾ ಎಂದು ವ್ಯಂಗ್ಯವಾಡಿದ್ದಾರೆ.