ಕರ್ನಾಟಕ

karnataka

ಏಕರೂಪ ನಾಗರಿಕ ಸಂಹಿತೆ ಜಾರಿ ಪ್ರಸ್ತಾಪ: ಕಾನೂನು ಸಮಿತಿ ಚರ್ಚೆಗೂ ಮುನ್ನ ಮಹತ್ವದ ಸಭೆ ಕರೆದ ಕಾಂಗ್ರೆಸ್ ಸಂಸದೀಯ ಮಂಡಳಿ

By

Published : Jul 1, 2023, 6:33 PM IST

ಏಕರೂಪ ನಾಗರಿಕ ಸಂಹಿತೆ ಕುರಿತು ಕಾನೂನು ಸಮಿತಿಯ ಚರ್ಚೆಗೆ ಮುನ್ನ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ತಂಡ ಇಂದು ಸಭೆ ಸೇರಿದೆ.

Congress Parliamentary Strategy Group to meet today ahead of Law Panel's discussion on UCC
ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ

ನವದೆಹಲಿ: ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕುರಿತು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಭಾರತೀಯ ಜನತಾ ಪಕ್ಷ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದು​ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಜನಪಥ್ 10 ನಲ್ಲಿರುವ ಎಐಸಿಸಿ ಮಾಜಿ ಮುಖ್ಯಸ್ಥೆ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ನಡೆಯುತ್ತಿದೆ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಕಾಂಗ್ರೆಸ್​ ಪಕ್ಷ ಯಾವ ನಿಲುವು ತೆಗೆದುಕೊಳ್ಳಬೇಕು ಅನ್ನೋದರ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ.

ಇತ್ತೀಚೆಗೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ಪಕ್ಷದ ಹಿರಿಯ ನಾಯಕ ಮತ್ತು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಶೀಲ್ ಮೋದಿ, ಜುಲೈ 3, 2023 ರಂದು ಸೋಮವಾರ ಮಧ್ಯಾಹ್ನ 03.00 ಗಂಟೆಗೆ ಏಕರೂಪ ನಾಗರಿಕ ಸಂಹಿತೆ ಕುರಿತು ಸಭೆ ಕರೆಯಲಾಗಿದೆ.

ಈ ಸಭೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಸೂಚಿಸಬಹುದು. ಸಭೆಯಲ್ಲಿ ಅವರ ಅಭಿಪ್ರಾಯವನ್ನು ಪರಿಗಣಿಸಲಾಗುವುದು. ಸಮಿತಿಯು ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರನ್ನು ಹೊಂದಿರುವುದರಿಂದ, ಸಮಿತಿಯ ಸಭೆಯು ರಾಜಕೀಯೇತರವಾಗಿದೆ ಎಂದು ತಿಳಿಸಿದ್ದರು. ಈ ಭಾಗವಾಗಿ ಕಾಂಗ್ರೆಸ್​ ಸಂಸದೀಯ ಕಾರ್ಯತಂತ್ರ ತಂಡ​ ಇಂದು ಈ ಸಭೆ ಕರೆದಿದೆ.

ರಾಜ್ಯಸಭೆಯ ಪ್ರತಿಪಕ್ಷ ನಾಯಕರೂ ಆದ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಜೈರಾಮ್ ರಮೇಶ್, ಪಿ ಚಿದಂಬರಂ, ಪ್ರಮೋದ್ ತಿವಾರಿ, ಗೌರವ್ ಗೊಗೊಯ್, ಕೆ ಸುರೇಶ್ ಮತ್ತು ಮಾಣಿಕಂ ಠಾಗೋರ್ ಸೇರಿದಂತೆ ಉಭಯ ಸದನಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿ ಹಿನ್ನೆಲೆ ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಎಂದಿದ್ದರು. ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಭಾಗವಾಗಿದೆ. ಆದರೆ, ಕೆಲವು ವಿರೋಧಿಗಳು ಇಂದು ದೇಶದ ಜನರನ್ನು ಯುಸಿಸಿ ಹೆಸರಿನಲ್ಲಿ ವಿನಾ ಕಾರಣ ಪ್ರಚೋದಿಸುತ್ತಿದ್ದಾರೆ. ಸಂವಿಧಾನದಲ್ಲಿ ಸಮಾನ ಹಕ್ಕುಗಳ ಬಗ್ಗೆಯೂ ಹೇಳಲಾಗಿದೆ. ಸುಪ್ರೀಂ ಕೋರ್ಟ್ ಕೂಡ ಯುಸಿಸಿ ಜಾರಿಗೆ ತರುವಂತೆ ಹೇಳಿದೆ. ಈ (ವಿರೋಧ) ಜನರು ವೋಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ಅವರ ಈ ಹೇಳಿಕೆಯು ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಯಿತು.

ಕೇಂದ್ರ ನಿಲುವು ವಿರೋಧಿಸಿದ ಪ್ರತಿಪಕ್ಷಗಳು:ಪ್ರಧಾನಿ ಮೋದಿ ಅವರ ಈ ಮಾತುಗಳನ್ನು ಹಲವು ರಾಜಕೀಯ ಪಕ್ಷಗಳು ವಿರೋಧಿಸತೊಡಗಿವೆ. ಮುಂಬರುವ ಲೋಕಸಭಾ ಚುನಾವಣೆಯ ಗಮನ ಸೆಳೆಯಲು ಮತ್ತು ರಾಜಕೀಯ ಲಾಭಕ್ಕಾಗಿ ಪ್ರಧಾನಿ ಮೋದಿ ಯುಸಿಸಿ ವಿಷಯವನ್ನು ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

''ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪವು ಸಮಸ್ಯೆಯು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರದ ಪರಿಸ್ಥಿತಿಯಂತಹ ನೈಜ ಸಮಸ್ಯೆಗಳಿಂದ ದಿಕ್ಕು ತಪ್ಪಿಸುವ ತಂತ್ರವಾಗಿದೆ. ಮಣಿಪುರದ ಹಿಂಸಾಚಾರದಂತಹ ಘಟನೆಗಳನ್ನು ಪ್ರಧಾನಿ ಮೋದಿ ಹಗುರವಾಗಿ ತೆಗೆದುಕೊಂಡಿದ್ದಾರೆ. ಬಡತನ, ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಮೊದಲು ಗಮನಹರಿಸಕೆಂದು'' ಕಾಂಗ್ರೆಸ್ ನಾಯಕ ವೇಣುಗೋಪಾಲ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್, ಛತ್ತೀಸ್‌ಗಢದ ಭೂಪೇಶ್ ಬಘೇಲ್, ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಹಲವು ರಾಜಕೀಯ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

''ಕೇವಲ ಹಿಂದೂ-ಮುಸ್ಲಿಂ ಡೈನಾಮಿಕ್ಸ್‌ನತ್ತ ಏಕೆ ಗಮನಹರಿಸಿದ್ದಾರೆಂದು ಗೊತ್ತಾಗುತ್ತಿಲ್ಲ. ನಾವು ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯಬೇಕು. ಯಾವುದೇ ದೇಶದ ಯಾವುದೇ ಸಮಾಜವನ್ನು ನೀವು ಮರೆಯಲು ಸಾಧ್ಯವಿಲ್ಲ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುವ ಮೂಲಕ ರಾಜಕೀಯ ಲಾಭವನ್ನು ಬಯಸುತ್ತದೆ. ಕೋಮುವಾದದ ಆಧಾರದ ಮೇಲೆ ವಿಭಜಿಸುವ ಉದ್ದೇಶಪೂರ್ವಕ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಪ್ರಸ್ತಾಪ ಮಾಡಲಾಗುತ್ತಿದೆ'' ಎಂದು ಹಲವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಭಾರತದ ಭೂಪ್ರದೇಶದಾದ್ಯಂತ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿ ತರುವ ಬಗ್ಗೆ ಬಿಜೆಪಿಯ 2019ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ. ಅದರಂತೆ ಪಕ್ಷವು ಯುಸಿಸಿ ಅನುಷ್ಠಾನ ತರಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ:UCC row: 40% ಅಲ್ಪಸಂಖ್ಯಾತರ ಕಲ್ಯಾಣ ಬಜೆಟ್ ಯಾಕೆ ಕಡಿತಗೊಳಿಸಲಾಗಿದೆ.. ಮೋದಿಗೆ ಓವೈಸಿ ಪ್ರಶ್ನೆ

ABOUT THE AUTHOR

...view details