ಕರ್ನಾಟಕ

karnataka

By

Published : Apr 16, 2021, 3:02 PM IST

ETV Bharat / bharat

ಯುಪಿಯಲ್ಲಿ ಭಾನುವಾರ ಲಾಕ್​ಡೌನ್​.. 2ನೇ ಸಲ ಮಾಸ್ಕ್​ ನಿಯಮ ಉಲ್ಲಂಘಿಸಿದ್ರೆ 10 ಸಾವಿರ ದಂಡ!

ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಇದೀಗ ಭಾನುವಾರ ಲಾಕ್​ಡೌನ್​ ಮಾಡಿ ಆದೇಶ ಹೊರಹಾಕಲಾಗಿದ್ದು, ಕೆಲವೊಂದು ಕಟ್ಟುನಿಟ್ಟಿನ ಮಾರ್ಗಸೂಚಿ ರಿಲೀಸ್ ಮಾಡಲಾಗಿದೆ.

CM Yogi
CM Yogi

ಲಖನೌ:ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಭಾನುವಾರ ಸಂಪೂರ್ಣ ಲಾಕ್​ಡೌನ್​ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈ ಮಹತ್ವದ ಆದೇಶ ಹೊರಹಾಕಿದ್ದು, ಎರಡನೇ ಸಲ ಮಾಸ್ಕ್​ ನಿಯಮ ಉಲ್ಲಂಘನೆ ಮಾಡಿದ್ರೆ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಲಾಗಿದೆ.

ನಿನ್ನೆ ಒಂದೇ ದಿನ ಉತ್ತರ ಪ್ರದೇಶದಲ್ಲಿ 22,439 ಹೊಸ ಕೋವಿಡ್​ ಸೋಂಕಿತ ಪ್ರಕರಣ ದಾಖಲಾಗಿದ್ದು, 104 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ರಾತ್ರಿ 8ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ.

ಲಖನೌ, ಪ್ರಯಾಗರಾಜ್​, ವಾರಣಾಸಿ, ಕಾನ್ಪುರ್​ ನಗರ,ಗೌತಮ್​ ಬುದ್ಧ ನಗರ, ಗಾಜಿಯಾಬಾದ್​, ಮಿರತ್​, ಗೋರಖ್​ಪುರ್​​​ದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರಮುಖವಾಗಿ ಲಖನೌ, ವಾರಾಣಸಿ, ಪ್ರಯಾಗ್​ರಾಜ್​​ದಲ್ಲಿ ಪ್ರತಿದಿನ ಸಾವಿರಾರು ಕೋವಿಡ್​ ಪ್ರಕರಣ ದಾಖಲಾಗುತ್ತಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈಗಾಗಲೇ ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ABOUT THE AUTHOR

...view details