ಬದೌನ್ (ಉತ್ತರ ಪ್ರದೇಶ): ದೇಶದಲ್ಲಿ ಕೊರೊನಾ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೆ, ಇತ್ತ ಉತ್ತರ ಪ್ರದೇಶದ ಬದೌನ್ನಲ್ಲಿ ಸಾವಿರಾರು ಜನರು ಮುಸ್ಲಿಂ ಧರ್ಮಗುರುವಿನ ಅಂತಿಮ ಯಾತ್ರೆ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು.
ಉತ್ತರ ಪ್ರದೇಶದಲ್ಲಿ ಲಾಕ್ಡೌನ್ ಮಾದರಿಯ ಕಠಿಣ ಕರ್ಫ್ಯೂ ಜಾರಿಯಲ್ಲಿದೆ. ಅಲ್ಲದೇ ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರ ಸಂಖ್ಯೆಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ. ಆದ್ರೆ, ಈ ನಿಯಮಗಳನ್ನು ನಿರ್ಲಕ್ಷಿಸಿ ಭಾನುವಾರ ನಡೆದ ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಅವರ ಅಂತಿಮ ಯಾತ್ರೆಗೆ ಜನಸಮೂಹವೇ ಸೇರಿತ್ತು.