ಕರ್ನಾಟಕ

karnataka

ETV Bharat / bharat

ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ರಾಹುಲ್​: ಒಬ್ಬ ಕ್ರಿಮಿನಲ್​ ತನ್ನ ಕ್ರೈಂ ಒಪ್ಪಿಕೊಳ್ಳಲ್ಲ ಎಂದ ನಡ್ಡಾ - ಒಬ್ಬ ಕ್ರಿಮಿನಲ್​ ತನ್ನ ಕ್ರೈಂ ಒಪ್ಪಿಕೊಳ್ಳಲ್ಲ ಎಂದ ನಡ್ಡಾ

ಸೋನಿಯಾ, ರಾಹುಲ್​ ಅವರನ್ನು ಹತ್ತಿಕ್ಕಲು ಮೋದಿ ಸರ್ಕಾರ ಕೇಂದ್ರದ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಈ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ 'ಒಬ್ಬ ಕ್ರಿಮಿನಲ್​ ತನ್ನ ಕ್ರೈಂ ಒಪ್ಪಿಕೊಳ್ಳಲ್ಲ' ಎಂದು ತಿರುಗೇಟು ನೀಡಿದ್ದಾರೆ.

'Criminal never accepts his crime': JP Nadda on Sonia, Rahul ED summon
ಒಬ್ಬ ಕ್ರಿಮಿನಲ್​ ತನ್ನ ಕ್ರೈಂ ಒಪ್ಪಿಕೊಳ್ಳಲ್ಲ ಎಂದ ನಡ್ಡಾ

By

Published : Jun 1, 2022, 10:04 PM IST

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ, ಸಂಸದ ಸಂಸದ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ)ವು ವಿಚಾರಣೆಗೆ ಅವಕಾಶ ನೀಡುವಂತೆ ಸಮನ್ಸ್​ ಜಾರಿ ಮಾಡಿರುವ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶವನ್ನು ರಾಹುಲ್ ಗಾಂಧಿ ಕೋರಿದ್ದಾರೆ.

ಬುಧವಾರ ಇಬ್ಬರಿಗೂ ಸಮನ್ಸ್‌ ಜಾರಿ ಮಾಡಿರುವ ಇಡಿ, ರಾಹುಲ್ ಗಾಂಧಿಗೆ ಜೂನ್ 2ರಂದು(ಗುರುವಾರ) ಮತ್ತು ಸೋನಿಯಾ ಗಾಂಧಿಗೆ ಜೂನ್ 8ರಂದು ದೆಹಲಿಯಲ್ಲಿರುವ ಇಡಿ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆದರೆ, ರಾಹುಲ್​​ ನಾಳೆ (ಜೂನ್​ 2) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲ್ಲ. ಹೆಚ್ಚಿನ ಕಾಲಾವಕಾಶ ಕೊಡಬೇಕೆಂದು ಇಡಿಗೆ ಪತ್ರ ಬರೆದಿದ್ದಾರೆ. ಇತ್ತ, ಸೋನಿಯಾ ಜೂನ್ 8ರಂದೇ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದೇ ವೇಳೆ ಸೋನಿಯಾ ಮತ್ತು ರಾಹುಲ್​ಗೆ ಇಡಿ ಸಮನ್ಸ್​ ಜಾರಿ ಮಾಡಿರುವ ಸಂಬಂಧ ಕಾಂಗ್ರೆಸ್​ ಅಸಮಾಧಾನ ವ್ಯಕ್ತಪಡಿಸಿದೆ. ಸೋನಿಯಾ, ರಾಹುಲ್​ ಅವರನ್ನು ಹತ್ತಿಕ್ಕಲು ಮೋದಿ ಸರ್ಕಾರ ಕೇಂದ್ರದ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್​ನ ಈ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿರುಗೇಟು ನೀಡಿದ್ದಾರೆ. ಒಬ್ಬ ಅಪರಾಧಿ ತಾನು ಅಪರಾಧಿ ಅಥವಾ ಅಪ್ರಾಮಾಣಿಕ ವ್ಯಕ್ತಿ ಎಂದು ಒಪ್ಪಿಕೊಳ್ಳುವುದನ್ನು ನೀವು ಎಂದಾದರೂ ಕೇಳಿದ್ದೀರಾ ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ಪುತ್ರ ರಾಹುಲ್​​ಗೆ ಸಮನ್ಸ್​​

ABOUT THE AUTHOR

...view details