ಆಂಧ್ರಪ್ರದೇಶ/ಒಡಿಶಾ: ಗುಲಾಬ್ ಚಂಡಮಾರುತದಿಂದ ತತ್ತರಿಸಿ ಹೋಗಿದ್ದ ಆಂಧ್ರಪ್ರದೇಶದ ಶ್ರೀಕಾಕುಳಂ ಹಾಗೂ ವಿಜಯನಗರಂ ಜಿಲ್ಲೆಗಳಿಗೆ ಇದೀಗ ಜವಾದ್ ಚಂಡಮಾರುತದ ಭೀತಿ ಎದುರಾಗಿದೆ.
ಅಂಡಮಾನ್ ಸಮುದ್ರದಲ್ಲಿ ಸೃಷ್ಟಿಯಾಗಿರುವ ಜವಾದ್ ಚಂಡಮಾರುತ ವಾಯುವ್ಯ ದಿಕ್ಕಿನತ್ತ ಹೆಚ್ಚು ವೇಗವಾಗಿ ಸಾಗುತ್ತಿದ್ದು, ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿಗೆ ಬಂದು ನಾಳೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಆಂಧ್ರಪ್ರದೇಶದ ಶ್ರೀಕಾಕುಲಂ ಹಾಗೂ ವಿಜಯನಗರಂದಲ್ಲಿ ಈ ಸೈಕ್ಲೋನ್ ಹೆಚ್ಚು ಪ್ರಭಾವ ಬೀರುವ ಸಾಧ್ಯತೆ ಇದೆ. ನಾಳೆ ಗಂಟೆಗೆ 90 ಕಿ.ಮೀ ವೇಗದಲ್ಲಿ ಬರುವ ಸೈಕ್ಲೋನ್ನಿಂದ ಭಾರಿ ಮಳೆಯಾಗಿ ಈ ಪ್ರದೇಶಗಳಲ್ಲಿ ಹೆಚ್ಚು ಹಾನಿ ಉಂಟಾಗಬಹುದು ಎಂದು ಹವಾಮಾನ ಅಧಿಕಾರಿಗಳು ಅಂದಾಜಿಸಿದ್ದಾರೆ.