ಕರ್ನಾಟಕ

karnataka

By

Published : Feb 9, 2021, 1:11 PM IST

ETV Bharat / bharat

ಉತ್ತರಾಖಂಡ ಹಿಮ ದುರಂತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಚಮೋಲಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

glacier disaster
ಉತ್ತರಾಖಂಡ ಹಿಮ ದುರಂತ

ಚಮೋಲಿ:ಉತ್ತರಾಖಂಡದ ಚಮೋಲಿಯಲ್ಲಿ ಭಾನುವಾರ ಸಂಭವಿಸಿದ ಹಿಮಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಒಟ್ಟು 29 ಜನರು ಸಾವನ್ನಪ್ಪಿದ್ದಂತಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಸ್ವಾತಿ ಎಸ್ ಭಡೋರಿಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ.. ಗಾಯಾಳುಗಳ ಭೇಟಿ ಬಳಿಕ ಸಿಎಂ ವೈಮಾನಿಕ ಸಮೀಕ್ಷೆ

ಘಟನೆಯಿಂದಾಗಿ ಸುಮಾರು 171 ಮಂದಿ ನಾಪತ್ತೆಯಾಗಿದ್ದಾರೆ. ತಪೋವನ ಸುರಂಗದೊಳಗೆ ಸಿಲುಕಿರುವವರನ್ನು ರಕ್ಷಿಸಲು ಐಟಿಬಿಪಿ, ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು ಕಾರ್ಯಾಚರಣೆ ನಡಸುತ್ತಿವೆ.

ABOUT THE AUTHOR

...view details