ಕರ್ನಾಟಕ

karnataka

By

Published : Sep 13, 2022, 10:03 AM IST

Updated : Sep 13, 2022, 12:30 PM IST

ETV Bharat / bharat

ಆಟೋ ಚಾಲಕನ ಮನೆಯಲ್ಲಿ ಊಟ.. ರಿಕ್ಷಾದಲ್ಲೇ ಪ್ರಯಾಣ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್

ಗುಜರಾತ್​​ನಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸುತ್ತಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​​ ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿ, ಗಮನ ಸೆಳೆದಿದ್ದಾರೆ.

Delhi cm Arvind Kejriwal
Delhi cm Arvind Kejriwal

ಅಹಮದಾಬಾದ್​​(ಗುಜರಾತ್​​):ಮೋದಿ ತವರು ರಾಜ್ಯ ಗುಜರಾತ್​ ಮೇಲೆ ಕಣ್ಣಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಆಟೋ ಚಾಲಕನ ಮನೆಯಲ್ಲಿ ಊಟ ಮಾಡುವ ಮೂಲಕ ಗಮನ ಸೆಳೆದಿದ್ದು, ಜನಸಾಮಾನ್ಯರ ಹೃದಯ ಗೆದ್ದಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಆಟೋರಿಕ್ಷಾ ಚಾಲಕನ ಆಹ್ವಾನದ ಮೇರೆಗೆ ಆಟೋದಲ್ಲೇ ಅವರ ಮನೆಗೆ ತೆರಳಿ ಭೋಜನ ಸವಿದಿದ್ದಾರೆ. ಈ ವೇಳೆ ಪ್ರೋಟೋಕಾಲ್​​ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿರುವ ಘಟನೆ ಸಹ ನಡೆದಿದೆ.

ಮುಂದಿನ ಮೂರು ತಿಂಗಳಲ್ಲಿ ಗುಜರಾತ್​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಈ ಹಿಂದಿನಿಂದಲೂ ಭರ್ಜರಿ ತಯಾರಿ ನಡೆಸಿರುವ ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೇಲಿಂದ ಮೇಲೆ ಗುಜರಾತ್​ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸದ್ಯ ಎರಡು ದಿನದ ಪ್ರವಾಸದಲ್ಲಿರುವ ಕೇಜ್ರಿವಾಲ್​, ನಿನ್ನೆ ಮಧ್ಯಾಹ್ನ ಆಟೋರಿಕ್ಷಾ ಚಾಲಕರ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಆಟೋ ಚಾಲಕ ವಿಕ್ರಂ ದಾಂತಾನಿ ಎಂಬುವರು ತಮ್ಮ ಮನೆಗೆ ಊಟಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಜ್ರಿವಾಲ್​ ರಾತ್ರಿ 8 ಗಂಟೆಗೆ ಬರುವುದಾಗಿ ತಿಳಿಸಿದ್ದರು.

ರಿಕ್ಷಾದಲ್ಲೇ ಪ್ರಯಾಣ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್

ಇದನ್ನೂ ಓದಿ:ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ: ಕೇಜ್ರಿವಾಲ್ ಆಫರ್‌

ತಾವು ಉಳಿದುಕೊಂಡಿರುವ ಹೋಟೆಲ್​​​ಗೆ ಬಂದು ಆಟೋದಲ್ಲೇ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅದರಂತೆ ಆಟೋದಲ್ಲಿ ಚಾಲಕನ ಮನೆಗೆ ತೆರಳಿ ಊಟ ಮಾಡಿದ್ದಾರೆ. ಹೋಟೆಲ್​​ನಿಂದ ಆಟೋದಲ್ಲಿ ಹೋಗದಂತೆ ಪೊಲೀಸರು ತಡೆವೊಡ್ಡಿದ್ದಾರೆ. ಹೀಗಾಗಿ, ಕೆಲ ನಿಮಿಷ ವಾಗ್ವಾದ ನಡೆಯಿತು. ತದನಂತರ ಆಟೋದಲ್ಲಿ ತೆರಳಲು ಅವಕಾಶ ನೀಡಲಾಗಿದೆ. ಈ ವಿಚಾರವನ್ನಿಟ್ಟುಕೊಂಡು ಬಿಜೆಪಿ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಸಹ ನಡೆಸಿದೆ.

ಗುಜರಾತ್​ನಲ್ಲಿ ಆಮ್​ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ಹಾಗೂ ಪ್ರತಿಯೊಬ್ಬರಿಗೂ ಉದ್ಯೋಗ ನೀಡಲಾಗುವುದು ಎಂದು ಈಗಾಗಲೇ ಕೇಜ್ರಿವಾಲ್ ಭರ್ಜರಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಉಚಿತ ಶಿಕ್ಷಣ, ಆರೋಗ್ಯ ಭಾಗ್ಯದ ಘೋಷಣೆ ಸಹ ಮಾಡಿದ್ದಾರೆ.

Last Updated : Sep 13, 2022, 12:30 PM IST

ABOUT THE AUTHOR

...view details