ಕರ್ನಾಟಕ

karnataka

By

Published : Jan 29, 2021, 2:03 PM IST

ETV Bharat / bharat

ಖಲಿಸ್ತಾನ್​ ಸಂಬಂಧಿತ ಟ್ವಿಟರ್​ ಖಾತೆಗಳ ಮೇಲೆ ದೆಹಲಿ ಪೊಲೀಸ್​ ಹದ್ದಿನಕಣ್ಣು

ಹಿಂಸಾತ್ಮಕ ಟ್ರ್ಯಾಕ್ಟರ್ ರ‍್ಯಾಲಿ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರರ ಕೈವಾಡವೂ ಇದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಖಲಿಸ್ತಾನ್​ ಸಂಬಂಧಿತ ಟ್ವಿಟರ್​ ಖಾತೆಗಳ ಮೇಲೆ ದೆಹಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Delhi police keep a watch on Khalistan-related Twitter accounts
ಖಲಿಸ್ತಾನ್​ ಸಂಬಂಧಿತ ಟ್ವಿಟರ್​ ಖಾತೆಗಳ ಮೇಲೆ ದೆಹಲಿ ಪೊಲೀಸ್​ ಹದ್ದಿನಕಣ್ಣು

ನವದೆಹಲಿ: ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಬೆನ್ನಲ್ಲೇ ದೆಹಲಿ ಪೊಲೀಸರೀಗ ಖಲಿಸ್ತಾನ್​ ಸಂಬಂಧಿತ ಟ್ವಿಟರ್​ ಖಾತೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಈಗಾಗಲೇ ಹಿಂಸಾಚಾರ ಕುರಿತು ದ್ವೇಷಪೂರಿತ ಮಾಹಿತಿ ಹಂಚಿಕೊಳ್ಳುತ್ತಿದ್ದ ಸುಮಾರು 550ಕ್ಕೂ ಹೆಚ್ಚು ಖಾತೆಗಳನ್ನು ಟ್ವಿಟರ್ ಸ್ಥಗಿತಗೊಳಿಸಿದೆ. ಈ ಸಂಬಂಧ ತನಿಖೆ ಕೈಗೊಂಡಿರುವ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್​ಗಳನ್ನು ಮಾಡಿರುವ ಇಂತಹ ಮತ್ತಷ್ಟು ಖಾತೆಗಳನ್ನು ಹುಡುಕುತ್ತಿದ್ದಾರೆ.

ಈ ಹಿಂಸಾತ್ಮಕ ರ‍್ಯಾಲಿ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರರ ಕೈವಾಡವೂ ಇದೆ ಎಂಬ ಆರೋಪಗಳು ಕೇಳಿಬಂದಿದ್ದು, ಖಲಿಸ್ತಾನ್​ ಸಂಬಂಧಿತ ಟ್ವಿಟರ್​ ಖಾತೆಗಳ ಮೇಲೆ ದೆಹಲಿ ಪೊಲೀಸರು ದೃಷ್ಟಿ ಹಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ದೆಹಲಿಯ ಹಿಂಸಾಚಾರ.. 550ಕ್ಕೂ ಹೆಚ್ಚು ಟ್ವಿಟರ್ ಖಾತೆಗಳು ಅಮಾನತು..

ಜನವರಿ 26ರಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್​ ಸಿಬ್ಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ಈವರೆಗೆ 19 ಮಂದಿಯನ್ನು ಅರೆಸ್ಟ್​ ಮಾಡಲಾಗಿದ್ದು, 50 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್​, ಸ್ವರಾಜ್​ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್​​ ಸೇರಿ 37 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ABOUT THE AUTHOR

...view details