ನವದೆಹಲಿ: ದಿಗ್ವಿಜಯ್ ಸಿಂಗ್ ನಿಲುವುಗಳು 'ಪಾಕಿಸ್ತಾನ ಪರ'ವಾಗಿವೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಜಿತಿನ್ ಪ್ರಸಾದ್ ಟೀಕಿಸಿದ್ದಾರೆ. ಮುಂದೊಂದು ದಿನ ಸಿಂಗ್ ಅವರು, 'ಇಂದಿರಾ ಜಿ' ಅವರನ್ನೂ ಖಂಡಿಸಬಹುದು ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ ದಿಗ್ವಿಜಯ್ ಸಿಂಗ್, ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡುತ್ತ, ಜಮ್ಮು-ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಅತ್ಯಂತ ಬೇಸರದ ನಿರ್ಧಾರವಾಗಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ಬಗ್ಗೆ ಮರುಪರಿಶೀಲನೆ ನಡೆಸುವುದಾಗಿ ಹೇಳಿದ್ದರು. ಇದು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ.