ಕರ್ನಾಟಕ

karnataka

By

Published : Jul 1, 2022, 8:51 PM IST

ETV Bharat / bharat

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಮುರ್ಮು ಗೆಲುವಿನ ಸಾಧ್ಯತೆ ಹೆಚ್ಚಿಸಿದೆ: ಮಮತಾ ಬ್ಯಾನರ್ಜಿ

ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್​ಡಿಎದಿಂದ ಕಣಕ್ಕಿಳಿದಿರುವ ದ್ರೌಪದಿ ಮುರ್ಮು ಗೆಲ್ಲುವ ಸಾಧ್ಯತೆ ದಟ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Mamata on Draupadi Murmu
Mamata on Draupadi Murmu

ಕೋಲ್ಕತ್ತಾ(ಪಶ್ಚಿಮ ಬಂಗಾಳ):ರಾಷ್ಟ್ರಪತಿ ಅಭ್ಯರ್ಥಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದಿರುವ ಪಶ್ಚಿಮ ಬಂಗಾಳ ಸಿಎಂ ಬ್ಯಾನರ್ಜಿ, ದ್ರೌಪದಿ ಮುರ್ಮು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಉಚ್ಛರಿಸಿದ್ದಾರೆ.

ಇಸ್ಕಾನ್​ ರಥಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರ ಉಮೇದುವಾರಿಕೆ ಸಲ್ಲಿಕೆ ಬಗ್ಗೆ ಬಿಜೆಪಿ ಮೊದಲೇ ತಿಳಿಸಿದ್ದರೆ, ಅವರನ್ನು ಬೆಂಬಲಿಸುವ ಬಗ್ಗೆ ನಾನು ಯೋಚನೆ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದಿರುವ ದಿಢೀರ್ ರಾಜಕೀಯ ಬೆಳವಣಿಗೆ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಗೆಲುವಿನ ಸಾಧ್ಯತೆ ಹೆಚ್ಚಿಸಿವೆ. ಇದೀಗ ಎನ್​ಡಿಎ ಸಂಖ್ಯೆ ಹೆಚ್ಚಾಗಿರುವ ಕಾರಣ ಗೆಲುವು ಖಚಿತ. ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮುರ್ಮು ಹೆಸರು ಘೋಷಿಸುವ ಮೊದಲು ಬಿಜೆಪಿ ನನ್ನ ಸಲಹೆ ಕೇಳಿದ್ದರೆ ನಾನು ಪರಿಗಣಿಸುತ್ತಿದ್ದೆ. ಆದರೆ, ಇದೀಗ ವಿರೋಧ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು.

ಇದನ್ನೂ ಓದಿ:ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್​ ಹೆಸರು 'ಭಾಗ್ಯನಗರ': ರಘುಬರ್​ ದಾಸ್​

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ಪ್ರತಿಪಕ್ಷಗಳು ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.

ABOUT THE AUTHOR

...view details