ಮುಂಬೈ:ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಲ್ಲಿನ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಆಗಸ್ಟ್ 4 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಈ ಬಾರಿ ಆಗಸ್ಟ್ 4 ರವರೆಗೆ ಅವರು ಮನೆ ಅಡುಗೆ ಸೇವಿಸಲು ನ್ಯಾಯಾಲಯ ಅನುಮತಿಸಿದೆ. ಪತ್ರಾ ಚಾಲ್ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್, ವಿಶೇಷ ಪಿಎಂಎಲ್ಎ ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣದ ವಿಚಾರಣೆ ನಡೆಯಿತು.
ಪತ್ರಾ ಚಾಲ್ ಭೂ ಹಗರಣ: ಆಗಸ್ಟ್ 4 ರವರೆಗೆ ಸಂಜಯ್ ರಾವತ್ ಇಡಿ ವಶಕ್ಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನ್ಯಾಯಾಲಯವು ಆಗಸ್ಟ್ 4ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.
ಸಂಜಯ್ ರಾವತ್
ಸಂಜಯ್ ರಾವತ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು, ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನಂತರ ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ:'ಪತ್ರಾ ಚಾಲ್' ಭೂ ಹಗರಣ ಪ್ರಕರಣ: ಶಿವಸೇನಾ ಸಂಸದ ಸಂಜಯ್ ರಾವುತ್ ಬಂಧನ