ಕರ್ನಾಟಕ

karnataka

ETV Bharat / bharat

ಆರ್ಥಿಕ ಸಂಕಷ್ಟ: ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪತ್ನಿಯ ಕೊಂದು ವೃದ್ಧ ಆತ್ಮಹತ್ಯೆ

ಆರ್ಥಿಕ ಸಮಸ್ಯೆಯಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ನಂತರ ವೃದ್ಧ ಪತಿ ತಾನೂ ಕೂಡ ಸಾವಿಗೆ ಶರಣಾದ ಘಟನೆ ಪಶ್ಚಿಮ ಬಂಗಾಳದ ಜಾದವಪುರದಲ್ಲಿ ನಡೆದಿದೆ.

By

Published : Apr 8, 2023, 8:23 PM IST

Elderly man kills wife and commits suicide over financial stress
ಆರ್ಥಿಕ ಸಂಕಷ್ಟ: ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪತ್ನಿಯ ಕೊಂದ ನಂತರ ವೃದ್ಧ ಆತ್ಮಹತ್ಯೆ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಆರ್ಥಿಕ ಸಂಕಷ್ಟದಿಂದ 62 ವರ್ಷದ ವ್ಯಕ್ತಿಯೊಬ್ಬರು ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ್ದಾರೆ. ನಂತರ ತಾವೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ, ಸಾವಿಗೂ ಮುನ್ನ ಡೆತ್​ ನೋಟ್​ ಸಹ ಬರೆದಿಟ್ಟಿದ್ದಾರೆ.

ರಾಜಧಾನಿ ಕೋಲ್ಕತ್ತಾ ಸಮೀಪದ ಜಾದವಪುರದ ಚಿತ್ತರಂಜನ್ ಕಾಲೋನಿಯಲ್ಲಿ ಶುಕ್ರವಾರ ಈ ದುರಂತ ನಡೆದಿದೆ. ಮೃತರನ್ನು ಬೈದ್ಯನಾಥ್ ಪ್ರಸಾದ್ (62) ಮತ್ತು ಅವರ ಪತ್ನಿ ಜಾಲಿ ಪ್ರಸಾದ್ (57) ಎಂದು ಗುರುತಿಸಲಾಗಿದೆ. ಈ ಬಗ್ಗೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈದ್ಯಕೀಯ ಬಿಲ್​ ಪಾವತಿಸಲು ತೊಂದರೆ: ಖಾಸಗಿ ಕಂಪನಿಯೊಂದರಲ್ಲಿ ಚಾಲಕರಾಗಿ ಬೈದ್ಯನಾಥ್ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಣ್ಣಿನ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರ ದೃಷ್ಟಿ ನಷ್ಟವಾಗಿತ್ತು. ಇದರಿಂದಾಗಿ ತಮ್ಮ ಕೆಲಸವನ್ನೂ ಕಳೆದುಕೊಂಡಿದ್ದರು. ಮತ್ತೊಂದೆಡೆ, ಜಾಲಿ ಪ್ರಸಾದ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆದರೆ, ಕಳೆದುಕೊಂಡ ಬಳಿಕ ಈ ದಂಪತಿಗೆ ಜೀವನ ನಡೆಸುವುದೆ ಕಷ್ಟಕರವಾಗಿತ್ತು.

ಅಲ್ಲದೇ, ಮನೆಯ ವೆಚ್ಚವನ್ನು ಭರಿಸುವುದೂ ಬೈದ್ಯನಾಥ್ ಪ್ರಸಾದ್ ಕಷ್ಟವಾಗಿತ್ತು. ಇಂತಹ ಸಂದರ್ಭದಲ್ಲಿ ಪತ್ನಿಯ ಕಿಮೋಥೆರಪಿ ವೆಚ್ಚಗಳು ಮತ್ತು ವೈದ್ಯಕೀಯ ಬಿಲ್‌ಗಳನ್ನು ಪಾವತಿಸಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದರು. ಇದರ ಪರಿಣಾಮವಾಗಿ ಮನೆಯಲ್ಲೇ ಬೈದ್ಯನಾಥ್ ತಮ್ಮ ಪತ್ನಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ಅವರೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತೀವ್ರ ಆರ್ಥಿಕ ಒತ್ತಡದಿಂಲೇ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳವುದಕ್ಕೆ ಕಾರಣವಾಗಿದೆ ಎಂದು ಡೆತ್​ ನೋಟ್​ನಲ್ಲೂ ಉಲ್ಲೇಖಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿನ ಕುರಿತು ಮತ್ತಷ್ಟು ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ನೆರೆಹೊರೆಯವರನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ದಂಪತಿ ಹಣಕಾಸಿನ ವಿಷಯಗಳಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು ಎಂದು ಅಕ್ಕ-ಪಕ್ಕದವರು ಸಹ ಹೇಳಿದ್ದಾರೆ.

ನವ ವಿವಾಹಿತೆ ಆತ್ಮಹತ್ಯೆ:ಮತ್ತೊಂದೆಡೆ, ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಮಂಗೋಳ ಪೊಲೀಸ್ ಠಾಣೆಯ ಖಿರಿಪರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಜುಮಾ ಸರ್ಕಾರ್ (19) ಎಂದು ಗುರುತಿಸಲಾಗಿದೆ.

ಖಿರಿಪಾರ ಗ್ರಾಮದ ಯುವಕ ಬಿಸ್ವದೀಪ್ ಸರ್ಕಾರ್ ಅವರೊಂದಿಗೆ ಜುಮಾ ಸರ್ಕಾರ್ ಬಹಳ ದಿನಗಳಿಂದ ಪ್ರೇಮ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಎರಡೂ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಿದ್ದರು. ಬಿಸ್ವದೀಪ್ ಸಣ್ಣ ವ್ಯಾಪಾರ ನಡೆಸುತ್ತಿದ್ದಾರೆ. ಮೊಬೈಲ್ ಕೊಡಿಸದ ವಿಚಾರವಾಗಿ ಗಲಾಟೆ ನಡೆದು ಜುಮಾ ಸರ್ಕಾರ್ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ:ರೀಲ್ಸ್​ ಮಾಡಲೆಂದು ಭಾವಿ ಪತಿಯನ್ನು ಪಾರ್ಕ್​ಗೆ ಕರೆದ ಹುಡುಗಿ .. ಯುವಕನ ಕತ್ತು ಕೊಯ್ದ ಅಪ್ರಾಪ್ತೆ!

ABOUT THE AUTHOR

...view details