ಕರ್ನಾಟಕ

karnataka

ETV Bharat / bharat

ಭದ್ರತಾ ಪಡೆ ನಕ್ಸಲರ ನಡುವೆ ಎನ್​​​ಕೌಂಟರ್: ಐವರು ಸೈನಿಕರಿಗೆ ಗಾಯ - ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ

ಚೈಬಾಸಾದ ಸರಂದಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ನಕ್ಸಲೀಯರ ನಡುವಿನ ಎನ್​ಕೌಂಟರ್​ನಲ್ಲಿ, ಐವರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಐವರಲ್ಲಿ ನಾಲ್ವರನ್ನು ರಾಂಚಿಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.

ಐವರು ಸೈನಿಕರಿಗೆ ಗಾಯ
ಐವರು ಸೈನಿಕರಿಗೆ ಗಾಯ

By

Published : Dec 1, 2022, 7:23 PM IST

ಚೈಬಾಸಾ (ಜಾರ್ಖಂಡ್​​): ಸರಂದಾದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಐವರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರು ಕೋಬ್ರಾ ಬೆಟಾಲಿಯನ್‌ಗೆ ಸೇರಿದವರಾಗಿದ್ದಾರೆ. ಈ ಪೈಕಿ ಗಾಯಗೊಂಡ ನಾಲ್ವರು ಯೋಧರಾದ ಸೂರಜ್ ಕುಮಾರ್, ಬುಧದೇವ್, ಸುಶೀಲ್ ಲಕ್ಡಾ, ಕೃಷ್ಣನಾಥ್ ಬೊಕ್ರಾ ಅವರನ್ನು ಉತ್ತಮ ಚಿಕಿತ್ಸೆಗಾಗಿ ರಾಂಚಿಗೆ ಕರೆತರಲಾಗಿದೆ.

ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಎನ್​​​ಕೌಂಟರ್

ಸರಂದಾ ಅರಣ್ಯದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಗುಂಡಿನ ದಾಳಿ ನಡೆದಿದೆ. ಟೊಂಟೊ ಮತ್ತು ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಲ್ಲಿ ಈ ದಾಳಿ ನಡೆದಿದೆ. ಗುರುವಾರ ಶೋಧ ಕಾರ್ಯಾಚರಣೆ ವೇಳೆ ಪೊಲೀಸರು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಮಾಹಿತಿ ಪ್ರಕಾರ, ನಕ್ಸಲೀಯರು ಡಿಸೆಂಬರ್ 02 ರಿಂದ ಡಿಸೆಂಬರ್ 08 ರವರೆಗೆ PLGA ವಾರವನ್ನು ಆಚರಿಸುತ್ತಿದ್ದಾರೆ. ಆದರೆ, ಅದಕ್ಕೂ ಒಂದು ದಿನ ಮೊದಲು, CRPF ಕೋಬ್ರಾ 209 ಬೆಟಾಲಿಯನ್​ನ 05 ಯೋಧರು ನಕ್ಸಲೀಯರೊಂದಿಗಿನ ಎನ್​ಕೌಂಟರ್​ನಲ್ಲಿ ಗಾಯಗೊಂಡಿದ್ದಾರೆ. ಎಲ್ಲಾ ಯೋಧರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ:ಶೋಪಿಯಾನ್ ಎನ್‌ಕೌಂಟರ್: ಜೆಇಎಂ ಉಗ್ರನ ಹತ್ಯೆ

ಪಿಎಲ್‌ಜಿಎ ವಾರದಲ್ಲಿ ನಕ್ಸಲೀಯರು ಗೆರಿಲ್ಲಾ ಯುದ್ಧದ ಮೂಲಕ ಭದ್ರತಾ ಪಡೆಗಳನ್ನು ಗುರಿಯಾಗಿಸಬಹುದು ಎಂಬ ಭಯ ಈಗಾಗಲೇ ಇತ್ತು. ಪ್ರಸ್ತುತ ಎಲ್ಲಾ ನಾಲ್ವರು ಗಾಯಗೊಂಡ ಜವಾನರನ್ನು ಮೆಡಿಕಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಗುಂಡಿನ ದಾಳಿ ನಡೆದಿದೆ.

ABOUT THE AUTHOR

...view details