ಕರ್ನಾಟಕ

karnataka

ETV Bharat / bharat

ಓರ್ವ ಪಾಕಿಸ್ತಾನಿ ಉಗ್ರ ಸೇರಿ ಮೂವರನ್ನು ಸದೆಬಡಿದ ಭಾರತೀಯ ಸೇನಾಪಡೆ - ಮೂವರು ಉಗ್ರರನ್ನು ಹೊಡೆದುರುಳಿಸಿದೆ ಭಾರತೀಯ ಸೇನಾಪಡೆ

ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ಪಡೆದ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿ, ಓರ್ವ ಪಾಕ್ ಭಯೋತ್ಪಾದಕ ಸೇರಿದಂತೆ ಮೂವರನ್ನು ಹೊಡೆದುರುಳಿಸಿದೆ.

ಭಾರತೀಯ ಸೇನಾಪಡೆ
ಭಾರತೀಯ ಸೇನಾಪಡೆ

By

Published : Aug 3, 2021, 11:12 AM IST

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಪಾಕ್ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಸದೆಬಡಿದಿದೆ.

ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆ ಕಾರ್ಯಾಚರಣೆ ಶುರು ಮಾಡಿತ್ತು. ಉಗ್ರ ಸಂಹಾರದ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಒಬ್ಬ ಪಾಕ್ ಭಯೋತ್ಪಾದಕ ಸೇರಿದಂತೆ ಮೂವರನ್ನು ಹತ್ಯೆ ಮಾಡಲಾಗಿದೆ ಎಂದು ಡಿಜಿಪಿ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಓದಿ: ತ್ರಿಪುರದಲ್ಲಿ ಉಗ್ರರ ಅಟ್ಟಹಾಸ: ಸಬ್‌ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಬಿಎಸ್​​ಎಫ್​​ ಯೋಧರು ಹುತಾತ್ಮ

ABOUT THE AUTHOR

...view details