ಹೈದರಾಬಾದ್:ಭೂ ಕಬಳಿಕೆ ಆರೋಪದ ಮೇಲೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಂಪುಟದಿಂದ ಹೊರಹಾಕಿದ್ದ ತೆಲಂಗಾಣ ಮಾಜಿ ಸಚಿವ ಎಟೆಲಾ ರಾಜೇಂದರ್ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಎಟೆಲಾ ರಾಜೇಂದರ್ಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ.
ಪಕ್ಷದ ಸೇರ್ಪಡೆ ಸಮಾರಂಭದ ವೇಳೆ ಸಂಸದ ಧರ್ಮಪುರಿ ಅರವಿಂದ್ ಸಂಸದ ಸೋಯಂ ಬಾಪುರಾವ್, ಶಾಸಕ ಎಂ.ರಘುನಂದನ್ ರಾವ್, ಜಿ ಪ್ರೀಮಂದರ್ ರೆಡ್ಡಿ ಸೇರಿದಂತೆ ತೆಲಂಗಾಣ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.