ಕರ್ನಾಟಕ

karnataka

ETV Bharat / bharat

30 ವರ್ಷಗಳಲ್ಲಿ 60 ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದ ಶಿಕ್ಷಕ ಕೊನೆಗೂ ಅರೆಸ್ಟ್​!

ಕೇರಳದ ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ನಿವೃತ್ತ ಶಿಕ್ಷಕನನ್ನು 30 ವರ್ಷಗಳಲ್ಲಿ 60 ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.

By

Published : May 14, 2022, 3:18 PM IST

teacher-held-in-kerala
ಶಿಕ್ಷಕ ಕೊನೆಗೂ ಅರೆಸ್ಟ್

ತಿರುವನಂತಪುರಂ(ಕೇರಳ) :ಇಲ್ಲಿನಮಲಪ್ಪುರಂ ಜಿಲ್ಲೆಯಲ್ಲಿ 30 ವರ್ಷಗಳಲ್ಲಿ 60 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಿವೃತ್ತ ಶಿಕ್ಷಕನನ್ನು ಬಂಧಿಸಲಾಗಿದ್ದು, ಈ ಘಟನೆಯ ಕುರಿತು ತನಿಖೆಗೆ ಸರ್ಕಾರ ಆದೇಶಿಸಿದೆ. ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಶಿಕ್ಷಕ ಹಾಗೂ ಮಲಪ್ಪುರಂ ಪುರಸಭೆಯ ಕೌನ್ಸಿಲ್ ಸದಸ್ಯ ಕೆ.ವಿ. ಶಶಿಕುಮಾರ್ ಬಂಧಿತ ಆರೋಪಿ.

ಪ್ರಕರಣ ಏನು?: ಮೂರು ಬಾರಿಯ ಪುರಸಭೆ ಸದಸ್ಯ, ಸಿಪಿಎಂ ನಾಯಕನಾದ ಶಶಿಕುಮಾರ್​​ ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದಾರೆ. ಇದೇ ವರ್ಷದ ಮಾರ್ಚ್​ನಲ್ಲಿ ನಿವೃತ್ತರಾಗಿದ್ದಾರೆ. ಇದಕ್ಕೂ ಮೊದಲು ಶಶಿಕುಮಾರ್​ ತಮ್ಮ ವೃತ್ತಿ ಜೀವನದ 30 ವರ್ಷಗಳಲ್ಲಿ ಸುಮಾರು 60 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವಿದೆ.

ಶಶಿಕುಮಾರ್​ ಶಿಕ್ಷಕನಾಗಿದ್ದ ಶಾಲೆಯ ಹಳೆ ವಿದ್ಯಾರ್ಥಿ ಇವರ ಮೇಲೆ 'ಮೀಟೂ' ಆರೋಪ ಮಾಡಿದ ಬಳಿಕ ಒಂದೊಂದೇ ಆರೋಪಗಳು ಬೆಳಕಿಗೆ ಬಂದಿವೆ. ಬಳಿಕ ಶಶಿಕುಮಾರ್​ನಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿನಿಯರು ದೂರುಗಳನ್ನು ಸಲ್ಲಿಸಿದ್ದಾರೆ.

ದೂರು ನೀಡಿದ್ರೂ ಕ್ರಮವಿಲ್ಲ:ಇನ್ನು ಶಿಕ್ಷಕ ಶಶಿಕುಮಾರ್​ ಶಾಲೆಯಲ್ಲಿ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರು ನೀಡಿದರೂ ಶಾಲಾ ಆಡಳಿತ ಮಂಡಳಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. 2019 ರಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಈ ಶಿಕ್ಷಕನ ವಿರುದ್ಧ ಮಲಪ್ಪುರಂ ಜಿಲ್ಲಾ ಪೊಲೀಸ್​ ಮುಖ್ಯಸ್ಥರನ್ನು ಸಂಪರ್ಕಿಸಿ ದೂರು ನೀಡಿತ್ತು.

ಇದಾದ ಬಳಿಕ ಸಿಪಿಎಂ ಶಾಖಾ ಸಮಿತಿಯ ಸದಸ್ಯ ಸ್ಥಾನದಿಂದ ಶಶಿಕುಮಾರ್​ನನ್ನು ಪಕ್ಷ ಉಚ್ಚಾಟಿಸಿತ್ತು. ಬಳಿಕ ಪುರಸಭೆಯ ಕೌನ್ಸಿಲರ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಇದೀಗ ಶಿಕ್ಷಕನ ವಿರುದ್ಧ 50 ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಅಲ್ಲದೇ ಈ ಬಗ್ಗೆ ತನಿಖೆ ನಡೆಸಲು ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ಲೋಪದೋಷಗಳ ಬಗ್ಗೆಯೂ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಇನ್ನು ಶಶಿಕುಮಾರ್​ ವಿರುದ್ಧ ಮಲಪ್ಪುರಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಓದಿ:ಬೇಸ್ಮೆಂಟ್​ ರಾಡ್​ ಮೇಲೆ ಬಿದ್ದ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ.. ದವಡೆ ಮೂಲಕ ತಲೆ ಮೇಲಿಂದ ಹಾದು ಹೋದ ಕಬ್ಬಿಣ!

ABOUT THE AUTHOR

...view details