ಅಯೋಧ್ಯೆ: ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಿ ಮುಕ್ತ ನೀಡುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಶರೀಫ್ ಅವರಿಗೆ 2020ರಲ್ಲಿ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ. ಆದ್ರೆ ಇದುವರೆಗೆ ಪ್ರಶಸ್ತಿ ಅವರ ಕೈ ಸೇರಿಲ್ಲ.
ಇಲ್ಲಿಯವರೆಗೆ 25,000 ಕ್ಕೂ ಹೆಚ್ಚು ಅನಾಥ ಶವಗಳ ಅಂತ್ಯಕ್ರಿಯೆ ನಡೆಸಿರುವ ಉತ್ತರ ಪ್ರದೇಶದ ಫೈಜಾಬಾದ್ನ ಮೊಹಮ್ಮದ್ ಶರೀಫ್ ಅವರ ಸೇವೆ ಗುರುತಿಸಿ ಕೇಂದ್ರ ಸರ್ಕಾರ 2020ರ ಗಣರಾಜ್ಯೋತ್ಸವ ದಿನದಿಂದ ಪದ್ಮಶ್ರೀ ಘೋಷಣೆ ಮಾಡಿತ್ತು. ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿರುವ 83 ವರ್ಷದ ಮೊಹಮ್ಮದ್ ಶರೀಫ್ ಅವರು ಪ್ರಶಸ್ತಿಗಾಗಿ ಕಾಯುತ್ತಿದ್ದಾರೆ.
ಈ ಬಗ್ಗೆ ಅವರೇ ಖುದ್ದಾಗಿ ಮಾತನಾಡಿದ್ದಾರೆ. ತಮಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವ ಸುದ್ದಿಯನ್ನ ಟಿವಿಯಲ್ಲಿ ನೋಡಿದ್ದೇನೆ. ಆದರೆ ಇಲ್ಲಿಯವರೆಗೆ ಅದು ತನಗೆ ಸಿಕ್ಕಿಲ್ಲ. ಸದ್ಯ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಶಸ್ತಿ ಮೊತ್ತದಿಂದ ತಮ್ಮ ಚಿಕಿತ್ಸೆಗೆ ಸಹಾಯವಾಗಲಿದೆ ಎಂದು ಶರೀಫ್ ಹೇಳಿಕೊಂಡಿದ್ದಾರೆ.