ಕರ್ನಾಟಕ

karnataka

ETV Bharat / bharat

ಕೌಟುಂಬಿಕ ಕಲಹ: ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ, ಕಂದಮ್ಮಗಳು ಸಾವು - Etv bharat kannada

ಕೌಟುಂಬಿಕ ಕಲಹದಿಂದಾಗಿ ಮಹಿಳೆಯೋರ್ವಳು ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಯತ್ನ- ಎರಡು ತಿಂಗಳ ಹಸುಳೆ ಸೇರಿ ಎಲ್ಲ ಮಕ್ಕಳು ದುರ್ಮರಣ- ರಾಜಸ್ಥಾನದ ಅಜ್ಮೇರ್​ನಲ್ಲಿ ದುರ್ಘಟನೆ

women jumped into a well with her four children
women jumped into a well with her four children

By

Published : Aug 6, 2022, 4:07 PM IST

ಜೈಪುರ(ರಾಜಸ್ಥಾನ):ಮನೆಯಲ್ಲಿನ ಕೌಟುಂಬಿಕ ಕಲಹದಿಂದಾಗಿ ತಾಯಿಯೋರ್ವಳು ನಾಲ್ವರು ಮಕ್ಕಳನ್ನ ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಅಜ್ಮೇರ್ ಜಿಲ್ಲೆಯ ಮಂಗಳಿಯವಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಲ್ವರು ಪುಟ್ಟ ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯ ಪತಿ ಈ ವೇಳೆ ಕೃಷಿ ಕೆಲಸ ಮಾಡ್ತಿದ್ದ ಎಂದು ತಿಳಿದುಬಂದಿದೆ.

ಕೌಟುಂಬಿಕ ಕಲಹದಿಂದಾಗಿ 32 ವರ್ಷದ ಮೋತಿದೇವಿ ಮನನೊಂದು ತನ್ನ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಕೋಮಲ್ (4 ವರ್ಷ), ರಿಂಕು (3 ವರ್ಷ), ರಾಜ್‍ವೀರ್ (22 ತಿಂಗಳು) ಮತ್ತು ದೇವರಾಜ್ (ಒಂದು ತಿಂಗಳು) ಮೃತಪಟ್ಟವರು. ಆದರೆ, ಮಹಿಳೆ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್​, ಎಸ್​​​​ಡಿಆರ್​ಎಫ್​ ಸಿಬ್ಬಂದಿ ದೌಡಾಯಿಸಿ ನಾಲ್ವರು ಮಕ್ಕಳ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ಮೋತಿದೇವಿ ಹಾಗೂ ಪತಿ ಗುರ್ಜರ್​​ ಶುಕ್ರವಾರ ರಾತ್ರಿ ಜಗಳವಾಡಿದ್ದಾರೆ. ಈ ವೇಳೆ ಮನನೊಂದಿರುವ ಮಹಿಳೆ ತನ್ನ ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದಾಳೆ. ಘಟನೆ ಬಗ್ಗೆ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಆದರೆ, ದುರಾದೃಷ್ಟವಶಾತ್ ಯಾವುದೇ ಮಗು ಬದುಕುಳಿದಿಲ್ಲ.

ಇದನ್ನೂ ಓದಿರಿ:ಕೌಟುಂಬಿಕ ಕಲಹ : ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ಪ್ರಾಣಬಿಟ್ಟ ತಾಯಿ

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಠಾಣೆಯ ಎಎಸ್​ಐ ಹೋಶಿಯಾರ್ ಸಿಂಗ್, ಮೋತಿ ದೇವಿ ಕಳೆದ ಕೆಲ ತಿಂಗಳಿಂದ ಖಿನ್ನತೆಗೊಳಗಾಗಿದ್ದರು. ಗಂಡನ ಮಾತಿನಿಂದ ಮೇಲಿಂದ ಮೇಲೆ ಒತ್ತಡಕ್ಕೊಳಗಾಗುತ್ತಿದ್ದರು. ಹೀಗಾಗಿ, ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆಂದು ತಿಳಿಸಿದ್ದಾರೆ. ಈಗಾಗಲೇ ನಾಲ್ವರು ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದಿದ್ದಾರೆ.

ABOUT THE AUTHOR

...view details