ಕರ್ನಾಟಕ

karnataka

By

Published : Nov 11, 2020, 11:37 PM IST

ETV Bharat / bharat

ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಧಾನಿ ಮೋದಿ

ಬಿಹಾರದ ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

pm modi
ಪ್ರಧಾನಿ ಮೋದಿ

ನವದೆಹಲಿ:ಕುಟುಂಬ ರಾಜಕಾರಣ ಹಾಗೂ ಕುಟುಂಬ ನಡೆಸುವ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆಯಾಗಿವೆ. ರಾಷ್ಟ್ರೀಯ ಪಕ್ಷವೊಂದು ಕೂಡಾ ಇದಕ್ಕೆ ಬಲಿಯಾಗಿದೆ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ "ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್'' ಎಂದು ಪುನರುಚ್ಚರಿಸಿದರು.

ಬಿಹಾರ ಮತ್ತು ಇತರ ಉಪಚುನಾವಣೆಗಳಲ್ಲಿನ ಫಲಿತಾಂಶಗಳು ಅವಲೋಕಿಸುವುದಾದರೆ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮಾತ್ರ ಜನರು ಈಗ ಬೆಂಬಲ ನೀಡುತ್ತಾರೆ ಎಂಬುದು ಗೊತ್ತಾಗಿದೆ. 21ನೇ ಶತಮಾನದಲ್ಲಿ ಅಭಿವೃದ್ಧಿ ಮಾತ್ರವೇ ರಾಷ್ಟ್ರ ರಾಜಕಾರಣಕ್ಕೆ ಆಧಾರವಾಗಿರಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ದೇಶದ ಜನರನ್ನು ಅಭಿನಂದಿಸಿದ ಪ್ರಧಾನಿ, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಿದ ಚುನಾವಣಾ ಆಯೋಗ ಹಾಗೂ ಭದ್ರತಾ ಪಡೆಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ABOUT THE AUTHOR

...view details