ಕರ್ನಾಟಕ

karnataka

By

Published : Apr 1, 2023, 10:50 PM IST

ETV Bharat / bharat

ನಳಂದಾ ಮತ್ತು ಸಸಾರಾಮ್​​ನಲ್ಲಿ ಮತ್ತೆ ಹಿಂಸಾಚಾರ: ಗುಂಡು ತಗುಲಿ ಇಬ್ಬರಿಗೆ ಗಾಯ

ಬಿಹಾರದಲ್ಲಿ ಹಿಂಸಾಚಾರ ಇಂದು ಮುಂದುವರೆದಿದ್ದು, ನಳಂದಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

firing-in-violence-case-in-nalanda
ನಳಂದಾ ಮತ್ತು ಸಸಾರಾಮ್​​ನಲ್ಲಿ ಮತ್ತೆ ಹಿಂಸಾಚಾರ : ಗುಂಡು ತಗುಲಿ ಇಬ್ಬರಿಗೆ ಗಾಯ

ನಳಂದಾ (ಬಿಹಾರ): ಬಿಹಾರದಲ್ಲಿ ಹಿಂಸಾಚಾರ ಮುಂದುವರಿದಿದೆ. ಇಂದು ಮತ್ತೆರಡು ಕಡೆ ಹಿಂಸಾಚಾರ ಉಂಟಾಗಿ ಮೂವರು ಗಾಯಗೊಂಡಿದ್ದಾರೆ. ರಾಮನವಮಿಯಂದು ಹಿಂಸಾಚಾರ ನಡೆದ ಬೆನ್ನಲ್ಲೇ ಇಂದು ಕೂಡ ನಳಂದಾ ವ್ಯಾಪ್ತಿಯಲ್ಲಿ ಎರಡು ಕಡೆ ಹಿಂಸಾಚಾರ ನಡೆದಿದೆ. ಇಲ್ಲಿನ ಪಹರಪುರ ಎಂಬಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಇಲ್ಲಿನ ಷರೀಫ್​ ಸದರ್​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಬನೌಲಿಯಾದಲ್ಲಿ ನಡೆದ ಹಿಂಸಾಚಾರದಲ್ಲಿ ಒಬ್ಬ ಪೊಲೀಸ್​ ಪೇದೆಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.

ರಾಮನವಮಿಯಂದು ಇಲ್ಲಿನ ಸಸಾರಾಮ್​ ಮತ್ತು ನಳಂದಾ ಪಟ್ಟಣದಲ್ಲಿ ಹಿಂಸಾಚಾರ ನಡೆದಿತ್ತು. ಗುರುವಾರ ಆರಂಭಗೊಂಡಿದ್ದ ಗಲಾಟೆ ಶುಕ್ರವಾರದ ವರೆಗೂ ಮುಂದುವರೆದಿತ್ತು. ಇದೇ ವೇಳೆ ಕೆಲ ದುಷ್ಕರ್ಮಿಗಳು ಮನೆಗಳಿಗೆ ನುಗ್ಗಿ ಲೂಟಿ ಮಾಡಿದ್ದರು. ಅಲ್ಲದೆ ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಈ ಸಂಬಂಧ 45 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಜೊತೆಗೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು 48 ಗಂಟೆಗಳ ಕಾಲ ಇಂಟರ್​ನೆಟ್​ ಸ್ಥಗಿತಗೊಳಿಸಲಾಗಿತ್ತು. ಅಲ್ಲದೆ ಸೆಕ್ಷನ್​​ 144 ಜಾರಿಗೊಳಿಸಲಾಗಿತ್ತು.

ಈ ಬೆನ್ನಲ್ಲೇ ಇಂದು ಕೆಲವೆಡೆ ಹಿಂಸಾಚಾರ ನಡೆದಿದ್ದು, ಈ ಸಂಬಂಧ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್​ ಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕ್ರಮವಹಿಸಿದ್ದಾರೆ. ಅಲ್ಲದೆ ಶಾಂತಿ ಕಾಪಾಡುವಂತೆ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಡಿಸಿ ಮತ್ತು ಎಸ್ಪಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಶ್‌ಗಂಜ್ ಪ್ರದೇಶದಲ್ಲೂ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಎರಡು ಗುಂಪುಗಳು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ನಿವೃತ್ತ ಪ್ರಾಧ್ಯಾಪಕರೋಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಸಾರಾಮ್​​ನಲ್ಲಿ ಬಾಂಬ್ ದಾಳಿ:ಇನ್ನು, ಸಸಾರಾಮ್​​ನಲ್ಲಿ ಬಾಂಬ್ ದಾಳಿಯಿಂದಾಗಿ ಐವರು ಗಾಯಗೊಂಡಿರುವ ಘಟನೆ ನಡೆದಿತ್ತು. ಈ ಪ್ರದೇಶದಲ್ಲಿ ಕಲ್ಲು ತೂರಾಟ ಮತ್ತು ಬಾಂಬ್ ದಾಳಿ ನಡೆಯುತ್ತಿದ್ದು, ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಹಿಂಸಾಚಾರ ಹಿನ್ನಲೆ, ಸಸಾರಾಮ್‌ನಲ್ಲಿ ಏಪ್ರಿಲ್ 4 ರವರೆಗೆ ಶಾಲೆಗಳನ್ನು ಮುಚ್ಚಲಾಗಿದೆ. ನಗರದಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಸಂಜೆ 4 ಗಂಟೆಗೆ ಮುಚ್ಚಲು ಆದೇಶಿಸಲಾಗಿದೆ.

ಇದನ್ನೂ ಓದಿ :ಬಿಹಾರ ಪ್ರವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ: ನಿಷೇಧಾಜ್ಞೆ ಹಿನ್ನೆಲೆ ಸಸಾರಾಮ್​ ಭೇಟಿ ರದ್ದು

ABOUT THE AUTHOR

...view details