ನವದೆಹಲಿ:ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ 1,130 ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಭಾನುವಾರ ಮಧುರೈಗೆ ಬಂದಿಳಿದಿದ್ದಾರೆ.
ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾದ ನಂತರ ಮಧುರೈ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಒಂಬತ್ತು ತಂಡಗಳಲ್ಲಿ ಬಿಎಸ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಸ್ಸೋಂನಿಂದ ಮಧುರೈ ರೈಲ್ವೆ ನಿಲ್ದಾಣಕ್ಕೆ ಬಂದ ಬಿಎಸ್ಎಫ್ ಸಿಬ್ಬಂದಿಯನ್ನು ಕೂಡಲೇ ಕೋವಿಡ್ -19 ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಅವರನ್ನು ಚುನಾವಣಾ ಭದ್ರತೆಗಾಗಿ ವಿವಿಧ ಗುಂಪುಗಳಾಗಿ ವಿಗಂಡಿಸಿ ತೆಂಕಸಿ, ಟುಟಿಕೊರಿನ್ ಮತ್ತು ನಾಗರ್ಕೋಯಿಲ್ ಜಿಲ್ಲೆಗಳಿಗೆ ಕಳುಹಿಸಲಾಯಿತು.