ನಾವಡ(ಬಿಹಾರ):ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಾದ ಎಂಬಲ್ಲಿನ ಆದರ್ಶ ನಗರದಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿತ್ತು. ಸಾಲ ವಸೂಲಾತಿ ಕಿರುಕುಳದಿಂದ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಹೇಳಿದ್ದಾರೆ.
ಸಾಲ ಮರುಪಾವತಿಸುವಂತೆ ಒತ್ತಡ: ನವಾದ ಜಿಲ್ಲೆಯ ಆದರ್ಶ ಸೊಸೈಟಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇದಾರನಾಥ ಗುಪ್ತಾ ಎಂಬವರ ಕುಟುಂಬದ 6 ಸದಸ್ಯರು ಸಾವಿಗೀಡಾಗಿದ್ದಾರೆ. ಇವರಲ್ಲಿ ಒಬ್ಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು ಇಲ್ಲಿನ ಜಿಲ್ಲಾ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.