ಕರ್ನಾಟಕ

karnataka

By

Published : Jul 29, 2023, 5:34 PM IST

Updated : Jul 29, 2023, 10:30 PM IST

ETV Bharat / bharat

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಚಿಂತಾಜನಕ: ಆಸ್ಪತ್ರೆಗೆ ದಾಖಲು..

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಯ ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಚಿಂತಾಜನಕವಾಗಿದೆ. ರಕ್ತದಲ್ಲಿನ ಆಮ್ಲಜನಕದ ಮಟ್ಟದಲ್ಲಿ ಕುಸಿತವಾಗಿದೆ. ಜೊತೆಗೆ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅವರ ಸಂಪೂರ್ಣವಾಗಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಅಲಿಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Former Chief Minister of West Bengal Buddhadeb Bharracharya
ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭರಾಚಾರ್ಯ ಆರೋಗ್ಯ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು..

ಕೋಲ್ಕತ್ತಾ (ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಯ ಅವರ ರಕ್ತದಲ್ಲಿನ ಆಮ್ಲಜನಕದ ಮಟ್ಟದಲ್ಲಿನ ಕುಸಿತ ಮತ್ತು ಉಸಿರಾಟದ ತೊಂದರೆಯಿಂದಾಗಿ, ಅವರು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಅಲಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಅವರಲ್ಲಿ ಆಮ್ಲಜನಕದ ಮಟ್ಟವು ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ತಕ್ಷಣವೇ ಬ್ಯಾಲಿಗಂಜ್‌ನ ಪಾಮ್ ಅವೆನ್ಯೂನಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಮಯದಲ್ಲಿ ಅವರನ್ನು ತೀವ್ರ ವೈದ್ಯಕೀಯ ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ.

ರಕ್ತದಲ್ಲಿನ ಆಮ್ಲಜನಕದ ಮಟ್ಟ ಇಳಿಕೆ:ಶನಿವಾರ ಬೆಳಗ್ಗೆ ಬುದ್ಧದೇಬ್ ಭಟ್ಟಾಚಾರ್ಯ ಅವರ ಆರೋಗ್ಯ ಹದಗೆಡಲು ಆರಂಭಿಸಿದೆ ಎಂದು ಆಸ್ಪತ್ರೆಯ ಮೂಲಗಳು ಬಹಿರಂಗಪಡಿಸಿವೆ. ಅವರ ರಕ್ತದಲ್ಲಿನ ಆಮ್ಲಜನಕದ ಮಟ್ಟವು ಕಡಿಮೆಯಾಗಲು ಪ್ರಾರಂಭಿಸಿತು, ವೈದ್ಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲು ನಿರ್ಧರಿಸಿದರು. ಪಾಮ್ ಅವೆನ್ಯೂದಲ್ಲಿನ ಅವರ ನಿವಾಸದಿಂದ ಅಲಿಪುರದ ಆಸ್ಪತ್ರೆಗೆ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ತ್ವರಿತವಾಗಿ ಕರೆದೊಯ್ಯಲಾಯಿತು. ಅವರನ್ನು ಸಾಗಿಸುವ ಸಮಯದಲ್ಲಿ, ಅವರ ದೈಹಿಕ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ಅಲಿಪುರದ ಖಾಸಗಿ ಆಸ್ಪತ್ರೆಯಿಂದ ಕ್ರಿಟಿಕಲ್ ಕೇರ್ ಆಂಬ್ಯುಲೆನ್ಸ್ ಅನ್ನು ಕಳುಹಿಸುವ ಅಗತ್ಯವಿತ್ತು. ಆದರೆ, ಈ ಎಲ್ಲ ವಿವರಗಳನ್ನು ಆಸ್ಪತ್ರೆಯ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ.

ಭಟ್ಟಾಚಾರ್ಯ ಅವರು ದೀರ್ಘಕಾಲದ ಅಬ್​ಸ್ಟ್ರಕ್ಟಿವ್​ ಪಲ್ಮನರಿ ಡಿಸೀಸ್ (COPD) ಯಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದು ಶ್ವಾಸಕೋಶಕ್ಕೆ ಗಾಳಿಯ ಹರಿವನ್ನು ತಡೆಯುವ ಉಸಿರಾಟದ ಸ್ಥಿತಿಯಾಗಿದೆ. ದುರದೃಷ್ಟವಶಾತ್, ಅವರು 2021ರಲ್ಲಿ COVID-19 ಸೋಂಕಿಗೆ ಒಳಗಾದಾಗ ಅವರ ಆರೋಗ್ಯದ ತೊಂದರೆಗಳು ಉಲ್ಬಣಗೊಂಡಿದ್ದವು. ಮೇ 18, 2021 ರಂದು, COVID-19 ಸೋಂಕಿನಿಂದಾಗಿ ಅವರು ಕ್ವಾರಂಟೈನ್‌ನಲ್ಲಿದ್ದರು. ಅವರ ಸ್ಥಿತಿ ಹದಗೆಟ್ಟಿದ್ದರಿಂದ, ಅದೇ ವರ್ಷ ಮೇ 25 ರಂದು ಅವರನ್ನು ಅಲಿಪುರದ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅವರನ್ನು ಜೂನ್ 2, 2021 ರಂದು ಅಲಿಪುರ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ನಂತರ ಸಿಐಟಿ ರಸ್ತೆಯಲ್ಲಿರುವ ನರ್ಸಿಂಗ್ ಹೋಮ್‌ನಲ್ಲಿ ಆರೈಕೆ ಪಡೆದರು.

ಆಸ್ಪತ್ರೆಯಿಂದ ಲಭಿಸದ ಅಧಿಕೃತ ಮಾಹಿತಿ:ಬುದ್ಧದೇಬ್ ಭಟ್ಟಾಚಾರ್ಯ ಅವರ ಆರೋಗ್ಯದ ಸ್ಥಿತಿ ಕುರಿತು ಸಾರ್ವಜನಿಕ ಮತ್ತು ರಾಜಕೀಯ ವಲಯಗಳಲ್ಲಿ ಕಳವಳವನ್ನು ಸೃಷ್ಟಿಸಿದೆ. ಅವರ ಹಿಂದಿನ ಆರೋಗ್ಯ ಸಮಸ್ಯೆಗಳು ಮತ್ತು ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಆಸ್ಪತ್ರೆಗೆ ದಾಖಲಾದ ಸುದ್ದಿ ಲಭಿಸಿದೆ. ಅವರ ಸ್ಥಿತಿ ಮತ್ತು ಐಸಿಯುನಲ್ಲಿ ಅವರು ಪಡೆಯುತ್ತಿರುವ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ.

ರಾಜಕೀಯ ಜೀವನ:ಬುದ್ಧದೇವ್ ಭಟ್ಟಾಚಾರ್ಯ ಅವರ ರಾಜಕೀಯ ಜೀವನವು ಪಶ್ಚಿಮ ಬಂಗಾಳ ಮತ್ತು ರಾಜ್ಯ ಜನರ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಅವರ ನೀತಿಗಳು ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ಅವರ ಈ ಕೊಡುಗೆಗಳು, ಅಭಿಮಾನಿಗಳು ಮತ್ತು ವಿಮರ್ಶಕರನ್ನು ಗಳಿಸಿವೆ. ಅವರ ಪ್ರಸ್ತುತ ಆರೋಗ್ಯದ ಚೇತರಿಕೆಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಸದ್ಯಕ್ಕೆ, ಬುದ್ಧದೇಬ್ ಭಟ್ಟಾಚಾರ್ಯ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿಗಳಿಗೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅಲಿಪುರದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡವು ಈ ಸಮಯದಲ್ಲಿ ಸಾಧ್ಯವಾದಷ್ಟು ಉತ್ತಮವಾದ ಆರೈಕೆ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ:ಹಿಂಸಾಚಾರ ಪೀಡಿತ ಮಣಿಪುರದ ಪರಿಸ್ಥಿತಿ ಅರಿಯಲು ಇಂಫಾಲ್‌ಗೆ ಬಂದಿಳಿದ INDIA ಮೈತ್ರಿಕೂಟದ ನಿಯೋಗ

Last Updated : Jul 29, 2023, 10:30 PM IST

ABOUT THE AUTHOR

...view details